AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ ಕಾಫಿ ಉದ್ಯಮಿ!

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸರ್ಕಾರಿ ಶಾಲೆಗೆ ಕಾಫಿ ರಫ್ತುದಾರ ಸಂತೋಷ್ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಮಗ ಈ ಶಾಲೆಯಲ್ಲೇ ಓದುತ್ತಿದ್ದಾನೆ. ಈ ದೇಣಿಗೆಯಿಂದ ಹೊಸ ತರಗತಿ ಕೊಠಡಿಗಳು, ಸಭಾಂಗಣ ಮತ್ತು ಇತರ ಸೌಲಭ್ಯಗಳ ನಿರ್ಮಾಣವಾಗಿದೆ. ಇತರ ಹಳೆ ವಿದ್ಯಾರ್ಥಿಗಳೂ ಶಾಲೆಗೆ ಸಹಾಯ ಮಾಡುತ್ತಿದ್ದು, ಇದರಿಂದ ಶಾಲೆಯು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಳ್ಳುವಂತಾಗಿದೆ.

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ ಕಾಫಿ ಉದ್ಯಮಿ!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 25, 2025 | 9:22 AM

ಚಿಕ್ಕಮಗಳೂರು, ಫೆಬ್ರವರಿ 25: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಫಿ ಉದ್ಯಮಿಯೊಬ್ಬರು ಸರ್ಕಾರಿ ಶಾಲೆಯೊಂಕ್ಕೆ ಬರೋಬ್ಬರಿ 2.18 ಕೋಟಿ ರೂ. ದೇಣಿಗೆ ನೀಡಿರುವ ಬಗ್ಗೆ ವರದಿಯಾಗಿದೆ. ವಿಶೇಷವೆಂದರೆ, ಆ ಉದ್ಯಮಿ ತನ್ನ ಮಗನನ್ನೂ ಅದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಮುದ್ರೆಮನೆ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರಾದ ಸಂತೋಷ್, ಸರ್ಕಾರಿ ಶಾಲೆಯಲ್ಲಿ ಓದಿ, ನಂತರ ಕಾಫಿ ಉದ್ಯಮದಲ್ಲಿ ಸಾಧನೆ ಮಾಡಿದ್ದಾರೆ. ಸದ್ಯ ಅವರು ಕಾಫಿ ರಫ್ತು ಉದ್ಯಮ ನಡೆಸುತ್ತಿದ್ದಾರೆ.

ಸಂತೋಷ್ ಮುತ್ತಿಗೆಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ. 1973 ರಲ್ಲಿ ಸ್ಥಾಪನೆಯಾದ ಈ ಶಾಲೆಯಲ್ಲಿ ಪ್ರಸ್ತುತ 363 ವಿದ್ಯಾರ್ಥಿಗಳು ಇದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದ ತಿಳಿಸಿದೆ. ಸಂತೋಷ್ ಅವರ ದೇಣಿಗೆಯ ನೆರವಿನಿಂದ ಶಾಲೆಯಲ್ಲಿ ಎಂಟು ಸುಸಜ್ಜಿತ ತರಗತಿ ಕೊಠಡಿಗಳನ್ನು ನಿರ್ಮಿಸಲಾಗಿದೆ. 18 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣವನ್ನು ನಿರ್ಮಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ದೇಣಿಗೆಯ ನೆರವಿನಿಂದ ‘ವಿವೇಕ ಯೋಜನೆಯ’ಡಿಯಲ್ಲಿ 56 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಹೆಚ್ಚುವರಿ ತರಗತಿ ಕೊಠಡಿಗಳನ್ನು ಸೇರಿಸಲಾಗಿದೆ. ಫೆಬ್ರವರಿ 28 ರಂದು ಒಟ್ಟು 12 ತರಗತಿ ಕೊಠಡಿಗಳನ್ನು ಉದ್ಘಾಟಿಸಲಾಗುವುದು ಎಂದು ವರದಿ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿರುವ ಉದ್ಯಮಿಯಿಂದಲೂ ದೇಣಿಗೆ

ಅಂದಹಾಗೆ, ಮುತ್ತಿಗೆಪುರದ ಈ ಶಾಲೆಗೆ ಅನೇಕ ದಾನಿಗಳಿಂದ ದೇಣಿಗೆಗಳು ಹರಿದು ಬರುತ್ತಿವೆ. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಈ ಗ್ರಾಮದ ಉದ್ಯಮಿ ಸಿದ್ದಿಕ್, ಶಾಲೆಗೆ 60,000 ರೂ. ಮೌಲ್ಯದ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕವನ್ನು ದಾನ ಮಾಡಿದ್ದಾರೆ. ಶಾರ್ಲಿನ್ ವಿಲಿಯಮ್ಸ್ ಎಂಬ ಕಂಪನಿಯು 18 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳನ್ನು ನೀಡಿದೆ. ಯೂತ್ ಫಾರ್ ಸೇವಾ ಸಂಸ್ಥೆಯು ಎಂಟು ಕಂಪ್ಯೂಟರ್‌ಗಳು ಮತ್ತು ಅವುಗಳ ಬಳಕೆಗೆ ಅಗತ್ಯವಿರುವ ಟೇಬಲ್‌ಗಳನ್ನು ಒದಗಿಸಿದೆ. ಶಾಲಾ ಆವರಣ ಮತ್ತು ತರಗತಿ ಕೊಠಡಿಗಳಲ್ಲಿ 20 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ದಾನಿಗಳು ಮುಂದೆ ಬಂದಿದ್ದಾರೆ. ಮಧ್ಯಾಹ್ನದ ಊಟ ತಯಾರಿಗಾಗಿ 5 ಲಕ್ಷ ರೂ. ವೆಚ್ಚದಲ್ಲಿ ಹೈಟೆಕ್ ಅಡುಗೆಮನೆಯನ್ನು ನಿರ್ಮಿಸಲು ಸಹ ದೇಣಿಗೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ಬಜೆಟ್: ಸಿಎಂ ಸಿದ್ದರಾಮಯ್ಯ ಬಳಿ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ

ಶಾಲೆಯು ರಾಜ್ಯದಲ್ಲೇ ಮಾದರಿಯಾಗುತ್ತಿದ್ದು, ದಾನಿಗಳು ಶಾಲೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಧುಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 am, Tue, 25 February 25

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!