AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡು ಮೈಸೂರು, ಚಾಮರಾಜನಗರ ಮಾತ್ರವಲ್ಲದೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಭೀತಿ ಶುರುವಾಗಿದೆ. ಹೀಗಾಗಿ ಗಡಿಭಾಗದ ಜಿಲ್ಲೆಗಳ ಜಿಲ್ಲಾಡಳಿತ ಕಟ್ಟೆಚ್ಚರವಹಿಸಿದ್ದು, ಮೈಸೂರಿಗೆ ಆಗಮಿಸುವ ಕೇರಳಿಗರ ಮೇಲೆ ನಿಗಾ ಇರಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನಿಫಾ ವಾರ್ಡ್ ತೆರೆಯಲಾಗಿದೆ.

Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ
ನಿಫಾ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಕಟ್ಟೆಚ್ಚರ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದ ಜಿಲ್ಲಾಡಳಿತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 16, 2023 | 10:55 AM

Share

ಚಿಕ್ಕಮಗಳೂರು, ಸೆ.16: ಕೇರಳದಲ್ಲಿ ನಿಫಾ ವೈರಸ್ (Nipah Virus) ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡು ಮೈಸೂರು (Mysore), ಚಾಮರಾಜನಗರ ಮಾತ್ರವಲ್ಲದೆ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲೂ ಭೀತಿ ಶುರುವಾಗಿದೆ. ಹೀಗಾಗಿ ಗಡಿಭಾಗದ ಜಿಲ್ಲೆಗಳ ಜಿಲ್ಲಾಡಳಿತಗಳು ಕಟ್ಟೆಚ್ಚರವಹಿಸಿದ್ದು, ಮೈಸೂರಿಗೆ ಆಗಮಿಸುವ ಕೇರಳಿಗರ ಮೇಲೆ ನಿಗಾ ಇರಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನಿಫಾ ವಾರ್ಡ್ ತೆರೆಯಲಾಗಿದೆ.

ಕಾಫಿನಾಡಿನಲ್ಲೂ ನಿಫಾ ವೈರಸ್ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಹೈ ಅಲರ್ಟ್ ಆಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಒಟ್ಟು ಆರು ಹಾಸಿಗೆಯ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಅಲರ್ಟ್​ ಆದ ಬಾಗಲಕೋಟೆ ಆರೋಗ್ಯ ಇಲಾಖೆ: ನಿಫಾ ವೈರಸ್​​ ಬಗ್ಗೆ ಜನರಲ್ಲಿ ಜಾಗೃತಿ

ಕೇರಳ ರಾಜ್ಯದ ಪ್ರವಾಸಿಗರು ದಿನ ನಿತ್ಯ ಪ್ರವಾಸಿತಾಣಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಕಚೇರಿ ಸಮೀಪದ ನಗರಸಭೆ ಆವರಣದ ಮರಗಳಲ್ಲಿರುವ ನೂರಾರು ಸಂಖ್ಯೆಯಲ್ಲಿ ಬಾವಲಿಗಳು ವಾಸಿಸುತ್ತಿವೆ. ಹೀಗಾಗಿ ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ನಿಫಾ ವೈರಸ್ ಹರಡುವ ಆತಂಕ ಎದುರಾಗಿದೆ.

ಮನೆ ಸಮೀಪ ಬಾವಲಿಗಳಿದ್ದರೆ ಎಚ್ಚರ

ಮೈಸೂರು: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಭೀತರಾಗದೆ ಎಚ್ಚರಿಕೆ ವಹಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ. ನಿಫಾ ವೈರಸ್ ನಿಯಂತ್ರಣ ಮತ್ತು ಬರ ಘೋಷಣೆಯ ಕುರಿತು ಚರ್ಚಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಾಸ್ತವಿಕ ಸಭೆಯಲ್ಲಿ ಸೂಚನೆ ನೀಡಿದರು.

ನಿನ್ನೆ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಡಿಸಿ ಸಾರ್ವಜನಿಕರಿಗೆ ಭರವಸೆ ನೀಡಿದರು. ಕೇರಳದಿಂದ ಆಗಮಿಸುವ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಿ, ಜ್ವರ, ತಲೆನೋವು, ದೇಹನೋವು ಮುಂತಾದ ಲಕ್ಷಣಗಳಿದ್ದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಮನೆಗಳ ಬಳಿ ಬಾವಲಿಗಳ ಆವಾಸಸ್ಥಾನಗಳಿದ್ದರೆ ಎಚ್ಚರಿಕೆ ವಹಿಸಲು ಸಲಹೆ ನೀಡಿದರು. ಹಕ್ಕಿಗಳು ಸೇವಿಸಿದ ಹಣ್ಣುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೆ ಸೂಚಿಸಿದರು. ನಿಫಾ ವೈರಸ್ ಲಕ್ಷಣಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ