Sign In

By signing in or creating an account, you agree with Associated Broadcasting Company's Terms & Conditions and Privacy Policy.

Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡು ಮೈಸೂರು, ಚಾಮರಾಜನಗರ ಮಾತ್ರವಲ್ಲದೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಭೀತಿ ಶುರುವಾಗಿದೆ. ಹೀಗಾಗಿ ಗಡಿಭಾಗದ ಜಿಲ್ಲೆಗಳ ಜಿಲ್ಲಾಡಳಿತ ಕಟ್ಟೆಚ್ಚರವಹಿಸಿದ್ದು, ಮೈಸೂರಿಗೆ ಆಗಮಿಸುವ ಕೇರಳಿಗರ ಮೇಲೆ ನಿಗಾ ಇರಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನಿಫಾ ವಾರ್ಡ್ ತೆರೆಯಲಾಗಿದೆ.

Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ
ನಿಫಾ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಕಟ್ಟೆಚ್ಚರ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದ ಜಿಲ್ಲಾಡಳಿತ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on: Sep 16, 2023 | 10:55 AM

ಚಿಕ್ಕಮಗಳೂರು, ಸೆ.16: ಕೇರಳದಲ್ಲಿ ನಿಫಾ ವೈರಸ್ (Nipah Virus) ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡು ಮೈಸೂರು (Mysore), ಚಾಮರಾಜನಗರ ಮಾತ್ರವಲ್ಲದೆ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲೂ ಭೀತಿ ಶುರುವಾಗಿದೆ. ಹೀಗಾಗಿ ಗಡಿಭಾಗದ ಜಿಲ್ಲೆಗಳ ಜಿಲ್ಲಾಡಳಿತಗಳು ಕಟ್ಟೆಚ್ಚರವಹಿಸಿದ್ದು, ಮೈಸೂರಿಗೆ ಆಗಮಿಸುವ ಕೇರಳಿಗರ ಮೇಲೆ ನಿಗಾ ಇರಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನಿಫಾ ವಾರ್ಡ್ ತೆರೆಯಲಾಗಿದೆ.

ಕಾಫಿನಾಡಿನಲ್ಲೂ ನಿಫಾ ವೈರಸ್ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಹೈ ಅಲರ್ಟ್ ಆಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಒಟ್ಟು ಆರು ಹಾಸಿಗೆಯ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಅಲರ್ಟ್​ ಆದ ಬಾಗಲಕೋಟೆ ಆರೋಗ್ಯ ಇಲಾಖೆ: ನಿಫಾ ವೈರಸ್​​ ಬಗ್ಗೆ ಜನರಲ್ಲಿ ಜಾಗೃತಿ

ಕೇರಳ ರಾಜ್ಯದ ಪ್ರವಾಸಿಗರು ದಿನ ನಿತ್ಯ ಪ್ರವಾಸಿತಾಣಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಕಚೇರಿ ಸಮೀಪದ ನಗರಸಭೆ ಆವರಣದ ಮರಗಳಲ್ಲಿರುವ ನೂರಾರು ಸಂಖ್ಯೆಯಲ್ಲಿ ಬಾವಲಿಗಳು ವಾಸಿಸುತ್ತಿವೆ. ಹೀಗಾಗಿ ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ನಿಫಾ ವೈರಸ್ ಹರಡುವ ಆತಂಕ ಎದುರಾಗಿದೆ.

ಮನೆ ಸಮೀಪ ಬಾವಲಿಗಳಿದ್ದರೆ ಎಚ್ಚರ

ಮೈಸೂರು: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಭೀತರಾಗದೆ ಎಚ್ಚರಿಕೆ ವಹಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ. ನಿಫಾ ವೈರಸ್ ನಿಯಂತ್ರಣ ಮತ್ತು ಬರ ಘೋಷಣೆಯ ಕುರಿತು ಚರ್ಚಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಾಸ್ತವಿಕ ಸಭೆಯಲ್ಲಿ ಸೂಚನೆ ನೀಡಿದರು.

ನಿನ್ನೆ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಡಿಸಿ ಸಾರ್ವಜನಿಕರಿಗೆ ಭರವಸೆ ನೀಡಿದರು. ಕೇರಳದಿಂದ ಆಗಮಿಸುವ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಿ, ಜ್ವರ, ತಲೆನೋವು, ದೇಹನೋವು ಮುಂತಾದ ಲಕ್ಷಣಗಳಿದ್ದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಮನೆಗಳ ಬಳಿ ಬಾವಲಿಗಳ ಆವಾಸಸ್ಥಾನಗಳಿದ್ದರೆ ಎಚ್ಚರಿಕೆ ವಹಿಸಲು ಸಲಹೆ ನೀಡಿದರು. ಹಕ್ಕಿಗಳು ಸೇವಿಸಿದ ಹಣ್ಣುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೆ ಸೂಚಿಸಿದರು. ನಿಫಾ ವೈರಸ್ ಲಕ್ಷಣಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?