AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ದೊಡ್ಡ ಉಡವನ್ನೇ ನುಂಗಿದ ಬೃಹತ್ ಕಾಳಿಂಗ ಸರ್ಪ!

Chikkamagaluru: ಚಿಕ್ಕಮಗೂಳೂರಿನಲ್ಲಿ ಈ ದೃಶ್ಯ ಕಂಡ ಜನ ಒಂದು ಕ್ಷಣ ಭಯಾನಕ ಕಾಳಿಂಗ ಹಾವಿನ ಉಗ್ರರೂಪ ಕಂಡು ಅವಕ್ಕಾಗಿದ್ದಾರೆ. ಇಲ್ಲಿ ಬೃಹತ್ ಕಾಳಿಂಗವೊಂದು ದೊಡ್ಡ ಉಡವನ್ನು ನುಂಗುವ ಅತಿ ಅಪರೂಪದ ದೃಶ್ಯವನ್ನು ಜನ ಕುತೂಹಲದಿಂದ ವೀಕ್ಷಿಸಿದ್ದಾರೆ.

ಚಿಕ್ಕಮಗಳೂರು: ದೊಡ್ಡ ಉಡವನ್ನೇ ನುಂಗಿದ ಬೃಹತ್ ಕಾಳಿಂಗ ಸರ್ಪ!
ಉಡ ಹಿಡಿದ ಕಾಳಿಂಗ ಸರ್ಪ
TV9 Web
| Edited By: |

Updated on:Aug 10, 2021 | 8:46 AM

Share

ಚಿಕ್ಕಮಗಳೂರು: ಸಾಮಾನ್ಯವಾಗಿ ಹಾವು ಕಪ್ಪೆಯಂತಹ ಸಣ್ಣ ಜೀವಿಗಳನ್ನು ಹಿಡಿದು ತಿನ್ನುವುದನ್ನು ನಾವು ನೋಡಿರುತ್ತೇವೆ. ಆದರೆ, ಬಲು ಅಪರೂಪ ಎಂಬಂತೆ ಕೆಲವೊಮ್ಮೆ ಹಾವುಗಳು ತಮಗಿಂತ ದೊಡ್ಡದಾದ ಎನಿಸುವಂಥ, ದೊಡ್ಡ ದೇಹದ ಇತರ ಜೀವಿಗಳನ್ನು ಹಿಡಿದು ತಿಂದುಬಿಡುತ್ತವೆ. ಅಂತಹ ಅಪರೂಪದ ದೃಶ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂಡುಬಂದಿದೆ. ಕಾಳಿಂಗದ ಈ ರೂಪ ಕಂಡು ಜನರು ಒಂದುಕ್ಷಣ ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಬೃಹತ್ ಕಾಳಿಂಗವೊಂದು ದೊಡ್ಡ ಉಡವನ್ನು ಹಿಡಿದು ನುಂಗಿದೆ.

ಹೌದು, ಈ ವಿಚಾರ ಆಶ್ಚರ್ಯವಾದರೂ ನಿಜ. ಚಿಕ್ಕಮಗೂಳೂರಿನಲ್ಲಿ ಈ ದೃಶ್ಯ ಕಂಡ ಜನ ಒಂದು ಕ್ಷಣ ಭಯಾನಕ ಕಾಳಿಂಗ ಹಾವಿನ ಉಗ್ರರೂಪ ಕಂಡು ಅವಕ್ಕಾಗಿದ್ದಾರೆ. ಇಲ್ಲಿ ಬೃಹತ್ ಕಾಳಿಂಗವೊಂದು ದೊಡ್ಡ ಉಡವನ್ನು ನುಂಗುವ ಅತಿ ಅಪರೂಪದ ದೃಶ್ಯವನ್ನು ಜನ ಕುತೂಹಲದಿಂದ ವೀಕ್ಷಿಸಿದ್ದಾರೆ.

ಉಡ ತಾಕತ್ತಿನಲ್ಲಿ ಯಾವುದಕ್ಕೂ ಕಮ್ಮಿ ಇಲ್ಲದ ಜೀವಿ. ಛತ್ರಪತಿ ಶಿವಾಜಿ ಕಾಲದಲ್ಲಿ ಉಡಗಳನ್ನು ಬಳಸಿ ಬೆಟ್ಟವೇರಲು, ಕೋಟೆಗಳನ್ನೇರಿ ಶತ್ರುಗಳ ಮೇಲಿನ ಯುದ್ಧಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನುವುದು ಇತಿಹಾಸ. ಯಾಕಂದ್ರೆ ಉಡ ಅಷ್ಟು ಬಲಿಷ್ಠ ಎಂಬ ಕಾರಣಕ್ಕಾಗಿ.

ಆದರೆ, ಅದೇ ಬಲಿಷ್ಠ ಉಡವೊಂದನ್ನು ದೈತ್ಯ ಕಾಳಿಂಗ ಕಬಳಿಸಿದ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದುರ್ಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ತೇಜಸ್ವಿ ಎಂಬುವವರಿಗೆ ಸೇರಿದ ಕೊಡಿಗೆ ಎಸ್ಟೇಟ್​ನಲ್ಲಿ ಈ ಘಟನೆ ಕಾಣಲು ಸಿಕ್ಕಿದೆ. ಸಾಮಾನ್ಯವಾಗಿ ಕೇರೆ ಹಾವುಗಳಂದರೆ ಕಾಳಿಂಗ ಹಾವುಗಳಿಗೆ ಪಂಚಪ್ರಾಣ. ಅದನ್ನು ಹೊರತುಪಡಿಸಿದರೆ ಇಲಿ ಹೆಗ್ಗಣಗಳನ್ನೇ ಹೆಚ್ಚಾಗಿ ಬೇಟೆಯಾಡೋ ಕಾಳಿಂಗ ಅನಾಮತ್ತು ದೊಡ್ಡ ಉಡವನ್ನೇ ನುಂಗಿಹಾಕಿದೆ. ಬಳಿಕ, ಹಾಗೇ ಕಾಡು ಸೇರಿರೋದು ಸ್ಥಳೀಯರಿಗೆ ಭಯದ ಜೊತೆ ಚಕಿತವನ್ನೂ ಉಂಟುಮಾಡಿದೆ.

ವರದಿ: ಮಾಲ್ತೇಶ್ ಜನಗಲ್​, ಟಿವಿ9 ಆ್ಯಂಕರ್

ಇದನ್ನೂ ಓದಿ: ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಚಿಕ್ಕಮಗಳೂರಿನಲ್ಲಿ ಹೀಗೊಂದು ಘಟನೆ

ಚಿಕ್ಕಮಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ; ಜಿಲ್ಲೆಗೆ ಪ್ರವಾಸಿಗರು ಬರದಂತೆ ಮನವಿ

(King Cobra eating Bengal Monitor unique incident happened in Chikkamagaluru)

Published On - 7:15 pm, Mon, 9 August 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ