AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಶಾಲೆಗೆ ಒಬ್ಬ ಶಿಕ್ಷಕ-ಒಂದೇ ಕೊಠಡಿ-ಐದು ತರಗತಿ- 9 ಮಕ್ಕಳು! ಯಾರಿಗೆ ಹೇಗೆ ಯಾವಾಗ ಪಾಠ ಮಾಡಬಹುದು ಊಹೆ ನಿಮಗೇ ಬಿಟ್ಟಿದ್ದು!

Kumbagola govt school: ಈ ಶಾಲೆಯಲ್ಲಿ ಸಮಸ್ಯೆ ಇಲ್ಲ. ಶಾಲೆಯೇ ಸಮಸ್ಯೆಯಲ್ಲಿ ಇದೆ. ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ. ಶಾಲೆ ಆರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿ ಆಟವಾಡಿಕೊಂಡು ಇದ್ದಾರೆಯೇ ವಿನಃ ಶಾಲೆಗೆ ಬರುತ್ತಿಲ್ಲ. 

ಇಡೀ ಶಾಲೆಗೆ ಒಬ್ಬ ಶಿಕ್ಷಕ-ಒಂದೇ ಕೊಠಡಿ-ಐದು ತರಗತಿ- 9 ಮಕ್ಕಳು! ಯಾರಿಗೆ ಹೇಗೆ ಯಾವಾಗ ಪಾಠ ಮಾಡಬಹುದು ಊಹೆ ನಿಮಗೇ ಬಿಟ್ಟಿದ್ದು!
ಒಂದೇ ಶಾಲೆ- ಒಬ್ಬ ಶಿಕ್ಷಕ-ಒಂದೇ ಕೊಠಡಿ-ಐದು ತರಗತಿ- 9 ಮಕ್ಕಳು!
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on: Jun 09, 2023 | 11:32 AM

ಅವರೊಬ್ಬರೇ ಅಲ್ಲಿ ಶಿಕ್ಷಕ. ಒಂದೇ ಕೊಠಡಿ. ಐದು ತರಗತಿಗಳು. ಒಂಬತ್ತೇ ಮಕ್ಕಳು. 1ನೇ ಕ್ಲಾಸಿಗೆ ಎರಡು, 2ನೇ ಕ್ಲಾಸಿಗೆ ಎರಡು, 3ಕ್ಕೆ ಅದೂ ಇಲ್ಲ. 4ನೇ ಕ್ಲಾಸಿಗೆ ಇಬ್ರು, 5ಕ್ಕೆ ಮೂವರು. ಎಲ್ಲರಿಗೂ ಒಬ್ಬರೇ ಪಾಠ ಮಾಡ್ಬೇಕು.‌ ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲವಕ್ಕೂ ಅವರೊಬ್ಬರೇ ಮೇಷ್ಟ್ರು! ಶಾಲೆ ಆರಂಭವಾಗಿ 8 ದಿನವಾದ್ರು ಒಂದೇ ಒಂದು ಮಗುವೂ ಶಾಲೆಗೆ ಬಂದಿಲ್ಲ. ಪೋಷಕರು ಆ ಮೇಷ್ಟು ಹೋಗೋತನ್ಕ ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಿದ್ದಾರೆ. ಇದು ಸಮಸ್ಯೆಯ ಆಗರವಾಗಿರೋ ಕಾಫಿನಾಡ ಸರ್ಕಾರಿ ಸ್ಕೂಲ್ ಕಥೆ. ಇದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಗೋಳ ಸರ್ಕಾರಿ ಶಾಲೆಯ ಸ್ಥಿತಿ (Kumbagola govt school in Bidare). ಈ ಶಾಲೆಯಲ್ಲಿ 1 ಟು 7 – 9 ಜನ ಮಕ್ಕಳಿದ್ದಾರೆ. ಎಲ್ಲರಿಗೂ ಒಬ್ಬರೇ ಪಾಠ ಮಾಡ್ಬೇಕು.‌ ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲಾ ವಿಷಯಕ್ಕೂ ಅವರೊಬ್ಬರೇ ತಜ್ಞ ಶಿಕ್ಷಕ. ಇನ್ನು ಈ ಶಾಲೆಯಲ್ಲಿ ಇರುವುದು ಒಂದೇ ಒಂದು ಕೊಠಡಿ. ಒಂದರಿಂದ ಐದನೇ ತರಗತಿಯ 9 ಜನ ಮಕ್ಕಳು ಇದೊಂದೇ ಕೊಠಡಿಯಲ್ಲಿ ಪಾಠ ಕೇಳಬೇಕು.‌ ಇರೋದು ಒಬ್ಬರೇ ಶಿಕ್ಷಕ. ಆತ ಯಾರಿಗೆ ಯಾವ ಸಮಯದಲ್ಲಿ ಹೇಗೆ ಪಾಠ ಮಾಡಬಹುದು ನೀವೇ ಊಹಿಸಿ.

ಯಾವ ತರಗತಿಯ ಯಾವ ಪಾಠವನ್ನು ಯಾವ ಮಕ್ಕಳು ಕೇಳುತ್ತಾರೆ ಎಂದು ಪಾಠ ಮಾಡುವ ಶಿಕ್ಷಕರಿಗೂ ಗೊತ್ತಿಲ್ಲ. ಕೇಳುವ ಮಕ್ಕಳಿಗೆ ಮೊದಲೇ ಗೊತ್ತಿಲ್ಲ. ಶಾಲೆಗೆ ಸೂಕ್ತ ಕೊಠಡಿ ಹಾಗೂ ಶಿಕ್ಷಕರಿಗಾಗಿ ಸ್ಥಳೀಯರು ಮತ್ತು ಎಸ್.ಡಿ.ಎಂ.ಸಿ ಸದಸ್ಯರು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ, ನೋಡ್ತೀವಿ, ಮಾಡ್ತೀವಿ, ಕಳಿಸ್ತೀವಿ ಅನ್ನೋ ಮೇಲಾಧಿಕಾರಿಗಳಿಂದ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಕಾರಣದಿಂದಲೂ 30 ಮಕ್ಕಳಿದ್ದ ಕಾಡಂಚಿನ ಕುಗ್ರಾಮದ ಶಾಲೆಯಲ್ಲಿ ಇಂದು ಇರುವುದು ಕೇವಲ ಒಂಬತ್ತು ಮಕ್ಕಳು ಮಾತ್ರ. ಸರ್ಕಾರಕ್ಕೆ ಮನವಿ ಮಾಡಿ… ಮಾಡಿ… ಸಾಕಾಗಿದೆ ಅಂತಾರೆ ಸ್ಥಳೀಯರು.

ಹೌದು.. ಈ ಶಾಲೆಯಲ್ಲಿ ಸಮಸ್ಯೆ ಇಲ್ಲ. ಶಾಲೆಯೇ ಸಮಸ್ಯೆಯಲ್ಲಿ ಇದೆ. ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ. ಶಾಲೆ ಆರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿ ಆಟವಾಡಿಕೊಂಡು ಇದ್ದಾರೆಯೇ ವಿನಃ ಶಾಲೆಗೆ ಬರುತ್ತಿಲ್ಲ. ಕಾರಣ ಇಲ್ಲಿನ ಮೇಷ್ಟ್ರು. ಇಡೀ ಶಾಲೆಗೆ ಇರುವುದು ಒಬ್ಬರೇ ಶಿಕ್ಷಕರು. ಅವರು ಬೆಳಗ್ಗೆ 11.30ಕ್ಕೆ ಬಂದರೆ 2.30ಕ್ಕೆ ಮನೆ ಸೇರುತ್ತಾರೆ.‌ ಸಂಜೆ ಮಕ್ಕಳೇ ಶಾಲೆಯ ಬೀಗ ಹಾಕಿಕೊಂಡು ಮನೆಗೆ ಹೋಗಬೇಕು.

Also Read: ಎಷ್ಟೋ ಕಡೆ ಒಬ್ಬರೇ ಶಿಕ್ಷಕ-ಐದಾರು ತರ‘ಗತಿ’ಯಿದೆ, ಆದರೆ ಇಲ್ಲಿ ಒಂದೇ ಕುರ್ಚಿಗೆ ಇಬ್ಬರು ಡಿಡಿಪಿಐ ಕಿತ್ತಾಡುತ್ತಿದ್ದಾರೆ!

ಇದರಿಂದ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆಯೂ ಇಳಿಮುಖವಾಗಿ ಇಂದು ಒಂಬತ್ತಕ್ಕೆ ಬಂದು ನಿಂತಿದೆ. ಹಾಗಾಗಿ, ಇಲ್ಲಿನ ಪೋಷಕರು ಹೀಗಿರುವ ಶಿಕ್ಷಕ ಚಂದ್ರೇಗೌಡ ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡು ಬೇರೆ ಶಿಕ್ಷಕರು ಬರುವವರೆಗೂ ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸುತ್ತಿಲ್ಲ. ಇಲ್ಲಿನ ಶಿಕ್ಷಕರನ್ನ ಬೇರೆ ಕಡೆ ವರ್ಗಾವಣೆ ಮಾಡಿದರೆ ಶಾಲೆಗೆ ಮಕ್ಕಳ ಸಂಖ್ಯೆಯು ಹೆಚ್ಚುತ್ತದೆ, ಶಾಲೆಯೂ ಉಳಿಯುತ್ತೆ ಅಂತಿದ್ದಾರೆ ಸ್ಥಳೀಯರು.

ಒಟ್ಟಾರೆ, ಕೂಲಿ ಕಾರ್ಮಿಕರ ಮಕ್ಕಳೇ ಓದುವ ಕುಗ್ರಾಮದ ಸರ್ಕಾರಿ ಶಾಲೆಯೊಂದು ಸರ್ಕಾರಿ ಶಾಲೆಯೊಂದು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿ ಬೀಗ ಬೀಳುವ ಸ್ಥಿತಿ ತಲುಪಿದೆ. ಬಡ ಮಕ್ಕಳು ಮಾತ್ರ ಶಿಕ್ಷಣದಿಂದ ವಂಚಿತರಾಗೋದ್ರಲ್ಲಿ ನೋ ಡೌಟ್. ಸರ್ಕಾರ ರಾಜ್ಯದ ಉದ್ದಗಲಕ್ಕೂ ಫ್ರೀ… ಫ್ರೀ…ಫ್ರೀ… ಅಂತ ಉಚಿತಗಳ ಮಹಾಪೂರವನ್ನೇ ಹರಿಸಿದೆ. ಆದರೆ, ಸರ್ಕಾರದ ಆ ಉಚಿತ ಕೊಡುಗೆಗಳಿಗೆ ಬೆಲೆ ಬರಬೇಕು ಅಂದರೆ ಸರ್ಕಾರಿ ಶಾಲೆಗಳಿಗೆ ಜೀವ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ.

ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ