AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?

ಜಗಳವಾಗುತ್ತಿದೆ ಎಂದು ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ ಯುವಕನೊಬ್ಬ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಆತನ ಕರೆಗೆ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಶಾಕ್ ಆಗಿದ್ದಾರೆ. ಅಷ್ಟಕ್ಕೂ ಆ ಯುವಕ ಮಾಡಿದ್ದೇನು? ಆತ ಹಾಗೆ ಮಾಡಲು ಕಾರಣವೇನು? ಕೊನೆಗೆ ಏನಾಯ್ತು ಎಂಬುದನ್ನು ತಿಳಿಯಲು ಮುಂದೆ ಓದಿ.

ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?
ಕೊಟ್ಟಿಗೆಹಾರ ಪೊಲೀಸ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 27, 2024 | 11:13 AM

Share

ಚಿಕ್ಕಮಗಳೂರು, ಸೆಪ್ಟೆಂಬರ್ 27: ಯುವಕನೊಬ್ಬನ ಅವಾಂತರಕ್ಕೆ ಪೊಲೀಸರೇ ಬೇಸ್ತುಬಿದ್ದ ಘಟನೆ ಚಿಕ್ಕಮಗೂರು ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ್ ಎಂಬಾತ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ, ಜಗಳವಾಗುತ್ತಿದೆ ಸರ್, ಬೇಗ ಬನ್ನಿ ಎಂದು ಗೋಗರೆದಿದ್ದ. ಆತನ ಕರೆಗೆ ಸ್ಪಂದಿಸಿ ತಕ್ಷಣವೇ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿಗೆ ತಲುಪಿದ ಪೊಲೀಸರಿಗೆ ಒಂದು ಕ್ಷಣ ಶಾಕ್ ಆಗಿದೆ.

ಸ್ಥಳಕ್ಕೆ ಹೋದ ಪೊಲೀಸರು ಅಶೋಕ್​ ಬಳಿ ವಿಚಾರಣೆ ನಡೆಸಿದ್ದಾರೆ. ಅದಕ್ಕೆ ಆತ ನೀಡಿದ ಉತ್ತರದಿಂದ ಶಾಕ್ ಆಗಿದ್ದಾರೆ.

ಅಶೋಕ್ ಹೇಳಿದ್ದು ಕೇಳಿ ಪೊಲೀಸರು ಬೇಸ್ತು!

ಜಗಳವೂ ಇಲ್ಲ, ಏನೂ ಇಲ್ಲ ಸರ್. ನಾನು ಮಹಾಲಯಕ್ಕೆ ಹೋಗಬೇಕಿದೆ. ಬಸ್ ಸಿಗುತ್ತಿಲ್ಲ, ಸಮವೂ ಆಯಿತು. ಮಳೆ ಬೇರೆ ಬರುತ್ತಿದೆ. ದಯಮಾಡಿ ನೆಂಟರ ಮನೆಗೆ ಡ್ರಾಪ್ ಮಾಡಿ ಎಂದು ಪೊಲೀಸರ ಬಳಿ ಯುವಕ ಗೋಗರೆದಿದ್ದಾನೆ. ಅಷ್ಟೇ ಅಲ್ಲದೆ, ಕೊಟ್ಟಿಗೆಹಾರದಿಂದ ಫಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಪಟ್ಟು ಹಿಡಿದಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ

ಯುವಕನ ಮಾತು ಕೇಳಿ ಶಾಕ್ ಆದ 112 ಪೊಲೀಸರು, ಬುದ್ಧಿ ಹೇಳಿ ಅಶೋಕ್​ನನ್ನು ಲಾರಿ ಹತ್ತಿಸಿ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೆ, ವಾಪಸ್ ಬರುವಾಗ ಬಣಕಲ್ ಪೊಲೀಸ್ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?