ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?

ಜಗಳವಾಗುತ್ತಿದೆ ಎಂದು ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ ಯುವಕನೊಬ್ಬ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಆತನ ಕರೆಗೆ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಶಾಕ್ ಆಗಿದ್ದಾರೆ. ಅಷ್ಟಕ್ಕೂ ಆ ಯುವಕ ಮಾಡಿದ್ದೇನು? ಆತ ಹಾಗೆ ಮಾಡಲು ಕಾರಣವೇನು? ಕೊನೆಗೆ ಏನಾಯ್ತು ಎಂಬುದನ್ನು ತಿಳಿಯಲು ಮುಂದೆ ಓದಿ.

ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?
ಕೊಟ್ಟಿಗೆಹಾರ ಪೊಲೀಸ್
Follow us
| Updated By: ಗಣಪತಿ ಶರ್ಮ

Updated on: Sep 27, 2024 | 11:13 AM

ಚಿಕ್ಕಮಗಳೂರು, ಸೆಪ್ಟೆಂಬರ್ 27: ಯುವಕನೊಬ್ಬನ ಅವಾಂತರಕ್ಕೆ ಪೊಲೀಸರೇ ಬೇಸ್ತುಬಿದ್ದ ಘಟನೆ ಚಿಕ್ಕಮಗೂರು ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ್ ಎಂಬಾತ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ, ಜಗಳವಾಗುತ್ತಿದೆ ಸರ್, ಬೇಗ ಬನ್ನಿ ಎಂದು ಗೋಗರೆದಿದ್ದ. ಆತನ ಕರೆಗೆ ಸ್ಪಂದಿಸಿ ತಕ್ಷಣವೇ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿಗೆ ತಲುಪಿದ ಪೊಲೀಸರಿಗೆ ಒಂದು ಕ್ಷಣ ಶಾಕ್ ಆಗಿದೆ.

ಸ್ಥಳಕ್ಕೆ ಹೋದ ಪೊಲೀಸರು ಅಶೋಕ್​ ಬಳಿ ವಿಚಾರಣೆ ನಡೆಸಿದ್ದಾರೆ. ಅದಕ್ಕೆ ಆತ ನೀಡಿದ ಉತ್ತರದಿಂದ ಶಾಕ್ ಆಗಿದ್ದಾರೆ.

ಅಶೋಕ್ ಹೇಳಿದ್ದು ಕೇಳಿ ಪೊಲೀಸರು ಬೇಸ್ತು!

ಜಗಳವೂ ಇಲ್ಲ, ಏನೂ ಇಲ್ಲ ಸರ್. ನಾನು ಮಹಾಲಯಕ್ಕೆ ಹೋಗಬೇಕಿದೆ. ಬಸ್ ಸಿಗುತ್ತಿಲ್ಲ, ಸಮವೂ ಆಯಿತು. ಮಳೆ ಬೇರೆ ಬರುತ್ತಿದೆ. ದಯಮಾಡಿ ನೆಂಟರ ಮನೆಗೆ ಡ್ರಾಪ್ ಮಾಡಿ ಎಂದು ಪೊಲೀಸರ ಬಳಿ ಯುವಕ ಗೋಗರೆದಿದ್ದಾನೆ. ಅಷ್ಟೇ ಅಲ್ಲದೆ, ಕೊಟ್ಟಿಗೆಹಾರದಿಂದ ಫಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಪಟ್ಟು ಹಿಡಿದಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ

ಯುವಕನ ಮಾತು ಕೇಳಿ ಶಾಕ್ ಆದ 112 ಪೊಲೀಸರು, ಬುದ್ಧಿ ಹೇಳಿ ಅಶೋಕ್​ನನ್ನು ಲಾರಿ ಹತ್ತಿಸಿ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೆ, ವಾಪಸ್ ಬರುವಾಗ ಬಣಕಲ್ ಪೊಲೀಸ್ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್