ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಸತಿ ಶಾಲೆಯ ಇಬ್ಬರೂ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ

ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಯಶ್ವಿತ್ ಮತ್ತು ತರುಣ್ ಎಂಬ ಇಬ್ಬರು 9ನೇ ತರಗತಿ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮಾರ್ಚ್ 3 ರಂದು ಶಾಲೆಯಿಂದ ಹೊರಟ ಈ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು. ಪೊಲೀಸರ ತೀವ್ರ ಹುಡುಕಾಟದ ನಂತರ ಅವರು ಪತ್ತೆಯಾಗಿದ್ದು, ಸುರಕ್ಷಿತವಾಗಿದ್ದಾರೆ.

ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಸತಿ ಶಾಲೆಯ ಇಬ್ಬರೂ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ
ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಸತಿ ಶಾಲೆಯ ವಿದ್ಯಾರ್ಥಿಗಳು ಪತ್ತೆ
Edited By: ವಿವೇಕ ಬಿರಾದಾರ

Updated on: Mar 15, 2025 | 10:58 AM

ಚಿಕ್ಕಮಗಳೂರು, ಮಾರ್ಚ್​ 15: ಚಿಕ್ಕಮಗಳೂರು (Chikkamagaluru) ಹೊರವಲಯದ ತೇಗೂರು ಗ್ರಾಮದ ಬಳಿ ಇರುವ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು (Students) ಶುಕ್ರವಾರ (ಮಾ.14) ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಮಾರ್ಚ್​ 3ರಂದು ವಸತಿ ಶಾಲೆಯಿಂದ‌ ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಏನಿದು ಘಟನೆ

ಯಶ್ವಿತ್, ತರುಣ್ ಉತ್ತಮ ಸ್ನೇಹಿತರಾಗಿದ್ದಾರೆ. ಓದಿನಲ್ಲಿ ಆಸಕ್ತಿ ಇಲ್ಲದೆ ಇದ್ದರೂ ವಸತಿ ಶಾಲೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದರು.‌ 9 ನೇ ತರಗತಿ ಪರೀಕ್ಷೆ ಮುಗಿಸಿದ ಬಳಿಕ 10 ನೇ ತರಗತಿಯ ಸಿದ್ದತೆಗಾಗಿ ವಿಶೇಷ ತರಗತಿಗಳು ನಡೆಯುತ್ತಿದ್ದು, ಇದರಿಂದ ಪರೀಕ್ಷೆ ಮುಗಿದರೂ ರಜೆ ಮಾತ್ರ ಸಿಕ್ಕಿರಲಿಲ್ಲ. ವಿಶೇಷ ತರಗತಿ ಮುಗಿಸಿ ರೂಮ್ ಸೇರಿದ ಇಬ್ಬರು ಮೊದಲೇ ಮಾಡಿದ ಪ್ಲಾನ್​ನಂತೆ ವಸತಿ ಶಾಲೆಯ ಕಾಂಪೌಂಡ್ ಹಾರಿದ್ದಾರೆ. ಬಳಿಕ 5 ಕಿಮೀ ನಡೆದು ಇಬ್ಬರೂ ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ. ಅಲ್ಲಿಂದ ಬಸ್​ ಹತ್ತಿ ಮಂಗಳೂರಿಗೆ ತೆರಳಿದ್ದಾರೆ.

ಮಕ್ಕಳು ನಾಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು, ವಿದ್ಯಾರ್ಥಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದಾರೆ.

ಇದನ್ನೂ ಓದಿ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
ಬೆಂಕಿಯಿಂದ ಅರಣ್ಯ ನಾಶ ತಡೆಗೆ ಚಂದ್ರದ್ರೋಣ ಪರ್ವತಕ್ಕೆ ಡ್ರೋನ್ ಕಣ್ಗಾವಲು
ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ ಕಾಫಿ ಉದ್ಯಮಿಯಿಂದ 2.18 ಕೋಟಿ ರೂ. ದೇಣಿಗೆ!
ಸರ್ವೇ ಅಧಿಕಾರಿ ಸಾವಿನ ಹಿಂದೆ ಮಹಿಳೆಯ ಕರಿನೆರಳು: ಮೊಬೈಲ್​ ರಹಸ್ಯ ಬಯಲು

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸಿದಾಗ, ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್​ಗಾಗಿ ಕಾಯುತ್ತಿರುವ ದೃಶ್ಯ ಕಂಡಿದೆ. ಬಳಿಕ, ಇಬ್ಬರೂ ಬೆಂಗಳೂರು ಬಸ್​ ಹತ್ತಿರುವ ಮಾಹಿತಿ ಆಧಾರದ ಮೇಲೆ ಪೊಲೀಸರು ಬೆಂಗಳೂರಿನ ಹುಡುಕಾಟ ನಡೆಸಿದ್ದಾರೆ. ಅದೇರೀತಿ ಅನುಮಾನಗೊಂಡು ಮಂಗಳೂರಿನಲ್ಲೂ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಪೊಲೀಸರು ಇಬ್ಬರೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us