AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಕಡೂರು ಸಾಂಖ್ಯಿಕ ನಿರೀಕ್ಷಕ ಪತ್ತೆಯಾಗಿದ್ದಾರೆ. ಶಾಸಕ ಆನಂದ್, ಪಿಎ ಮಂಜುನಾಥ್ ಹಾಗೂ ತಹಸೀಲ್ದಾರ್ ಪೂರ್ಣಿಮಾ ವಿರುದ್ಧ ಗಂಭೀರ ಆರೋಪ ಮಾಡಿರುವ ಅಧಿಕಾರಿ, ಕಡೂರು ತಾಲೂಕು ಕಚೇರಿಯಲ್ಲಿ ನಕಲಿ ವ್ಯವಹಾರಗಳ ಹೆಚ್ಚಳದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ
ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್​​Image Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Feb 11, 2026 | 5:54 PM

Share

ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್​​ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್​​ನೋಟ್​​ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಿಕ ಇಕ್ಬಾಲ್ ನಾಪತ್ತೆಯಾಗಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್​​ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್​​ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್​​ನೋಟ್​​ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಅಧಿಕಾರಿ ಉಲ್ಲೇಖಿಸಿದ್ದ ಕಾರಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಇಕ್ಬಾಲ್​​ ಆರೋಪವೇನು?

ಕಡೂರು ಶಾಸಕ ಆನಂದ್, ಪಿಎ‌ ಮಂಜುನಾಥ್, ಕಡೂರು ತಹಶೀಲ್ದಾರ್ ಪೂರ್ಣಿಮಾ ಸೇರಿ ಐವರ ಬಗ್ಗೆ ಇಕ್ಬಾಲ್​​ ಗಂಭೀರ ಆರೋಪ ಮಾಡಿದ್ದಾರೆ. ಕಡೂರು ಶಾಸಕ ಮಂಜುನಾಥ್​​ ತಿಂಗಳು 25 ಸಾವಿರ ಹಣ ಕೊಡುವಂತೆ ಪೀಡಿಸುತ್ತಿದ್ದರು. ಕಳೆದ ಕೆಲದಿನಗಳ ಹಿಂದೆ ಫೇಕ್​​ ಮರಣಪತ್ರ ನೀಡುವಂತೆ ಕೇಳಿದ್ದರು. ನಾನು ಮುಸ್ಲಿಂ ಎನ್ನುವ ಕಾರಣಕ್ಕೆ ತಹಶೀಲ್ದಾರ್​​ ಪೂರ್ಣಿಮಾ ಪ್ರತಿದಿನ ಬೈಯುತ್ತಿದ್ದರು. ಮಂಜುನಾಥ್​​ ನಮ್ಮ ಸಮುದಾಯಕ್ಕೂ ಅವಮಾನಿಸಿದ್ದು, ಈ ಬಗ್ಗೆ ವಿಷಯವನ್ನು ಶಾಸಕರಿಗೆ ತಿಳಿಸಿದರೆ ಅವರೂ ನನಗೆ ಬೈದು ಕಳುಹಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನನ್ನು ವರ್ಗಾವಣೆ ಮಾಡಲಾಗಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳೋದಂತೂ ನಿಜ. ನನಗೆ ಕಿರುಕುಳ ನೀಡಿದವರು ಜೈಲಿಗೆ ಹೋಗಲೇ ಬೇಕು ಎಂದಿದ್ದಾರೆ.

ಇದನ್ನೂ ಓದಿ: ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್

ಕಡೂರು ತಾಲೂಕು ಕಚೇರಿಯಲ್ಲಿ ಅತೀ ಹೆಚ್ಚು ನಕಲಿ ವ್ಯವಹಾರಗಳು ನಡೆಯುತ್ತಿದ್ದು ಜಿಲ್ಲೆಯಲ್ಲಿಯೇ ಕಚೇರಿ ಪ್ರಥಮ ಸ್ಥಾನದಲ್ಲಿದೆ. ನಕಲಿ ಮರಣಪತ್ರ ಕೊಡಲ್ಲ ಎಂದಿದ್ದಕ್ಕೆ ನನ್ನ ಮೇಲೆ ಹುನ್ನಾರ ನಡೆಸಲಾಗಿದೆ. ನಾನು ಬದುಕಬೇಕಂದರೆ ನನಗೆ ನೀಡಲಾಗಿರುವ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಇಕ್ಬಾಲ್​ ಆಗ್ರಹಿಸಿದ್ದಾರೆ. ಸ್ಥಳೀಯರಿಂದ ದೂರು ಹಾಗೂ ಅನುಚಿತ ವರ್ತನೆ ಮೇರೆಗೆ ವರ್ಗಾವಣೆ ಮಾಡುವಂತೆ ಶಾಸಕ ಆನಂದ್ ಶಿಫಾರಸ್ಸು ಮಾಡಿದ್ದ ಹಿನ್ನೆಲೆ ಇಕ್ಬಾಲ್ ಟ್ರಾನ್ಸ್​​ಫರ್​​ ಮಾಡಲಾಗಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?