AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ನಾಡಿನಲ್ಲಿ ಮೂವರ ಮೇಲೆ ಮಂಗನ ದಾಳಿ; ರೇಗಿಸಿದವನ ಅಟ್ಟಾಡಿಸಿ ಕೈ ಕಚ್ಚಿದ ಕೋತಿ

ಮಂಗನಿಗೆ ಹೆದರಿ ಆಟೋ, ಕಾರುಗಳಲ್ಲಿ ಜಗದೀಶ್ ಕದ್ದು ಕೂತಿದ್ದರೂ ಬಿಡದೆ ದಾಳಿ ಮಾಡಿದೆ. ಅಲ್ಲದೆ ಜಗದೀಶ್ ಆಟೋದ ಸೀಟು ಕೂಡ ಹರಿದು ಹಾಕಿದೆ. ಅರಣ್ಯ ಸಿಬ್ಬಂದಿಗಳಿಗೂ ಸಿಗದೆ ಕೋತಿ ಓಡಾಡುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.

ಕಾಫಿ ನಾಡಿನಲ್ಲಿ ಮೂವರ ಮೇಲೆ ಮಂಗನ ದಾಳಿ; ರೇಗಿಸಿದವನ ಅಟ್ಟಾಡಿಸಿ ಕೈ ಕಚ್ಚಿದ ಕೋತಿ
ರೇಗಿಸಿದವನ ಅಟ್ಟಾಡಿಸಿ ಕೈ ಕಚ್ಚಿದ ಕೋತಿ
TV9 Web
| Updated By: ಸಾಧು ಶ್ರೀನಾಥ್​|

Updated on:Sep 17, 2021 | 3:57 PM

Share

ಚಿಕ್ಕಮಗಳೂರು: ಮೂವರ ಮೇಲೆ ಮಂಗ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಗ ನುಗ್ಗಿದ್ದು, ರೇಗಿಸಿದವನನ್ನು ಹುಡುಕಿ ಕೈ ಕಚ್ಚಿ ಗಾಯಗೊಳಿಸಿದೆ.

ನಿನ್ನೆ ಮಧ್ಯಾಹ್ನದಿಂದಲೂ ಕೋತಿ ಕಾಟ ಕೊಡಲು ಶುರುಮಾಡಿದ್ದು, ಕಾಫಿ ನಾಡಿನ ಜನ ಬೇಸತ್ತು ಹೋಗಿದ್ದಾರೆ. ನಿನ್ನೆ ಬೇರೆಯವರ ತಲೆ ಮೇಲೆ ಕೂತು ಕೋತಿ ಆಟವಾಡಿದ್ದು, ಆತನಿಗೆ ತೊಂದರೆ ಮಾಡಲಿಲ್ಲ. ಆದರೆ ಈ ಸಂದರ್ಭದಲ್ಲಿ ಆಟೋ ಚಾಲಕ ಮಂಗನಿಗೆ ರೇಗಿಸಿದ್ದು, ಸಿಟ್ಟಿಗೆದ್ದ ಕೋತಿ ಆಟೋ ಚಾಲಕ ಜಗದೀಶ್​ನನ್ನು ಹುಡುಕಿ ಕೈ ಕಚ್ಚಿದೆ.

ಮಂಗನಿಗೆ ಹೆದರಿ ಆಟೋ, ಕಾರುಗಳಲ್ಲಿ ಜಗದೀಶ್ ಕದ್ದು ಕೂತಿದ್ದರೂ ಬಿಡದೆ ದಾಳಿ ಮಾಡಿದೆ. ಅಲ್ಲದೆ ಜಗದೀಶ್ ಆಟೋದ ಸೀಟು ಕೂಡ ಹರಿದು ಹಾಕಿದೆ. ಅರಣ್ಯ ಸಿಬ್ಬಂದಿಗಳಿಗೂ ಸಿಗದೆ ಕೋತಿ ಓಡಾಡುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಹಾಸನದಲ್ಲಿ ನಿಲ್ಲದ ಕಾಡಾನೆ ಹಾವಳಿ; ಮನೆಯ ಕಾಂಪೌಂಡ್ ಬಳಿ ಬಂದು ಜನರನ್ನ ಅಟ್ಟಾಡಿಸಿದ ಒಂಟಿ ಆನೆಯ ಫೋಟೋಗಳಿವೆ

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

ಈ ಹಿಂದೆಯೂ ಕೂಡ ಕಾಫಿನಾಡಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ಬೆಳೆಯನ್ನು ನಾಶಪಡಿಸುತ್ತಿದ್ದವು:

ಮೂಡಿಗೆರೆ ತಾಲೂಕಿನಾದ್ಯಂತ ಬಹುತೇಕ ಕಾಫಿ ತೋಟಗಳಲ್ಲಿ ಈ ವಾನರಸೇನೆ ಮಾಡ್ತಿರೋ ಕಿತಾಪತಿ ಅಂತಿಂಥದ್ದಲ್ಲ. ಬರೀ ಕಾಫಿ ಕೊಯ್ಲು ಮಾಡ್ತಿಲ್ಲ, ಈ ಕೋತಿಗಳ ಗ್ಯಾಂಗ್ ಇಡೀ ಕಾಫಿ ತೋಟವನ್ನೇ ಗುಡಿಸಿ ಗುಂಡಾಂತರ ಮಾಡುತ್ತಿವೆ. ಒಂದೊಂದು ಮಂಗಗಳು ಒಂದೊಂದು ಕಾಫಿ ಗಿಡ ಏರಿ ಕುಳಿತು ಕಾಫಿ ಹಣ್ಣನ್ನು ಹಾಳು ಮಾಡುತ್ತಿರುವುದು ಕಾಫಿ ಬೆಳೆಗಾರರಲ್ಲಿ ಅತೀವ ಬೇಸರ ತರಿಸಿದೆ.

ಕಾಫಿ ಬೆಳೆಗಾರರು ವರ್ಷವಿಡೀ ಕಾಫಿ ಗಿಡಗಳನ್ನು ಮಕ್ಕಳಂತೆ ಪೋಷಿಸಿ, ಬೆಳೆಸಿ ಕಾಪಾಡಿಕೊಂಡ ಬಂದ ಬೆಳೆಯನ್ನು ಮಂಗಗಳು ತಿನ್ನುತ್ತಿರುವುದು ಕಾಫಿ ಬೆಳೆಗಾರರಿಗೆ ಸಹಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಕಾಫಿ ತೋಟಗಳಿಗೆ ನೂರಾರು ಮಂಗಗಳು ಲಗ್ಗೆಯಿಟ್ಟು, ಫಸಲನ್ನು ತಿನ್ನುತ್ತಿದ್ದು, ಕೋತಿಗಳ ಕಿತಾಪತಿಗೆ ಕಡಿವಾಣ ಹಾಕುವುದಕ್ಕೆ ರೈತರು ಹರಸಾಹಸ ಪಡುತ್ತಿದ್ದಾರೆ.

Published On - 11:59 am, Fri, 17 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ