KFD: ಮಲೆನಾಡಲ್ಲಿ ವರ್ಷದ ಮೊದಲ ಮಂಗನ ಕಾಯಿಲೆ ಪತ್ತೆ

ಬಾಳೆಹೊನ್ನೂರು ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ಇಲಾಖೆ ಟಿಸ್ಟ್​ಗೆ ಕಳುಹಿಸಿತ್ತು. ವರದಿ ಬಂದಿದ್ದು ಈ ವರ್ಷದ ಮೊದಲ ಕೆಎಫ್​ಡಿ ಪ್ರಕರಣ ಪತ್ತೆಯಾಗಿದೆ.

KFD: ಮಲೆನಾಡಲ್ಲಿ ವರ್ಷದ ಮೊದಲ ಮಂಗನ ಕಾಯಿಲೆ ಪತ್ತೆ
ಮಲೆನಾಡಲ್ಲಿ ವರ್ಷದ ಮೊದಲ ಮಂಗನ ಕಾಯಿಲೆ ಪತ್ತೆ
Follow us
| Updated By: ಆಯೇಷಾ ಬಾನು

Updated on:Jan 24, 2023 | 12:18 PM

ಚಿಕ್ಕಮಗಳೂರು: ಮಲೆನಾಡಲ್ಲಿ ಈ ವರ್ಷದ ಮೊದಲ‌ ಮಂಗನ ಕಾಯಿಲೆ(ಕೆಎಫ್​ಡಿ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.

ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ಇಲಾಖೆ ಟಿಸ್ಟ್​ಗೆ ಕಳುಹಿಸಿತ್ತು. ವರದಿ ಬಂದಿದ್ದು ಈ ವರ್ಷದ ಮೊದಲ ಕೆಎಫ್​ಡಿ ಪ್ರಕರಣ ಪತ್ತೆಯಾಗಿದೆ. ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಎದುರಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈಅಲರ್ಟ್ ಕೈಗೊಂಡಿದ್ದು ಪತ್ತೆಯಾದ ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತ ಪ್ರತಿ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ.

ಇದನ್ನೂ ಓದಿ: ಮಂಗನ ಕಾಯಿಲೆ ಉಪಟಳ ಹೆಚ್ಚಳವಾಯ್ತು, ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್​ ಸದಸ್ಯ ಬಲಿ

ಕ್ಯಾಸನೂರು ಅಡವಿ ರೋಗ, ಅಥವಾ ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ಎನ್ನುವ ಮಂಗನ ಕಾಯಿಲೆ ನಮ್ಮ ಮಲೆನಾಡು ಶಿವಮೊಗ್ಗದ ಕ್ಯಾಸನೂರು ಅರಣ್ಯ ಪ್ರದೇಶದಲ್ಲಿ 1957ರಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಸಾಮಾನ್ಯವಾಗಿ ಮಲೆನಾಡಿನ ಅರಣ್ಯಪ್ರದೇಶಗಳಲ್ಲಿ ಇದು ಪ್ರತೀ ವರ್ಷವೂ ಕಾಡುವ ಕಾಯಿಲೆಯಾಗಿದೆ. Flaviviridae ಎಂಬ ಕುಟುಂಬಕ್ಕೆ ಸೇರಿದ ವೈರಸ್ ಈ ಕಾಯಿಲೆಗೆ ಕಾರಣವಾಗಿದೆ. ಕೋತಿಯಲ್ಲಿ ಮೊದಲು ಈ ವೈರಸ್ ಪತ್ತೆಯಾದ್ದರಿಂದ ಇದನ್ನು ಮಂಗನ ಕಾಯಿಲೆ ಎಂದೇ ಗುರುತಿಸಲಾಗಿದೆ.

ಮಂಗನ ಕಾಯಿಲೆ ಹೇಗೆ ಹರಡುತ್ತದೆ?

ಹೇನು, ಚಿಗಟ, ತಿಗಣೆ, ಸೊಳ್ಳೆ ಇತ್ಯಾದಿ ರಕ್ತ ಹೀರುವ ಕೀಟಗಳಿಂದ ಈ ರೋಗ ಹರಡುತ್ತದೆ ಎನ್ನಲಾಗಿದೆ. ಅರಣ್ಯ ಪ್ರದೇಶಗಳಲ್ಲಿ ಕೋತಿ, ಹೆಗ್ಗಣ ಇತ್ಯಾದಿ ಪ್ರಾಣಿಗಳಿಗೆ ವೈರಸ್ ಸೋಂಕು ತಗುಲಿದರೆ, ಹೇನು, ಚಿಗಟ ಇತ್ಯಾದಿ ಮೂಲಕ ಅದು ಬೇರೆ ಬೇರೆ ಪ್ರಾಣಿಗಳಿಗೆ ಸುಲಭವಾಗಿ ಹರಡುವ ಸಾಧ್ಯತೆ ಇರುತ್ತದೆ. ಕೆಂಪು ಚಿಗಟ ಎಂಬ ಕೀಟ ಕೆಎಫ್‌ಎ ಅನ್ನು ಬಹಳ ವೇಗವಾಗಿ ಹರಡುತ್ತದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Tue, 24 January 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ