AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು

Chikkamagaluru New: ಸದ್ಯ ರಾಜ್ಯದಲ್ಲಿ ಮಳೆ ಇಲ್ಲದೇ ಎಲ್ಲೆಡೆ ಬರದ ಛಾಯೆ ಆವರಿಸಿದೆ. ಇತ್ತ ಹಚ್ಚಹಸಿರಿನಿಂದ ಕಂಗೊಳಿಸುವ ಚಿಕ್ಕಮಗಳೂರಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಮಲೆನಾಡಿನಲ್ಲಿ ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಿಂದ ಕಾಫಿ, ಅಡಿಕೆ, ಮೆಣಸು ಬೆಳೆ ಕುಂಠಿತಗೊಂಡಿದೆ. ಜೊತೆಗೆ ಪ್ರವಾಸಿಗರಿಲ್ಲದೇ ಪ್ರವಾಸಿ ತಾಣಗಳು ಕಳೆಗುಂದಿದೆ.

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು
ಬಿಸಿಲುImage Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 26, 2026 | 7:03 PM

Share

ಮುಖ್ಯಾಂಶಗಳು

  • ಮಳೆಗಾಲದ ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಬೇಸಿಗೆ ವಾತಾವರಣ
  • ಮುಂಗಾರು ವೈಫಲ್ಯದಿಂದ ಬೆಳೆಗಳ ಮೇಲೆ ಭಾರೀ ಪರಿಣಾಮ
  • ಕಾಫಿ, ಅಡಿಕೆ, ಮೆಣಸು ಬೆಳೆಗಾರರಿಗೆ ಆತಂಕ

ಚಿಕ್ಕಮಗಳೂರು, ಜೂನ್​​ 26: ಮಳೆಯನಾಡು ಹಾಗೂ ಕಾಫಿನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು (chikkamagaluru) ಈ ಸಂದರ್ಭದಲ್ಲಿ ಹಚ್ಚಹಸಿರು, ಮೋಡ ಕವಿದ ವಾತಾವರಣದಿಂದ ಕಂಗೊಳಿಸುವ ಸಮಯ. ಆದರೆ ಪ್ರಕೃಯ ಮುಸಿಗೆ ಈ ಬಾರಿ ಮುಂಗಾರು ಮಳೆ (Rain) ಸಂಪೂರ್ಣ ಕೈಕೊಟ್ಟಿದೆ. ಮಳೆ ಬದಲಿಗೆ ಸುಡುಬಿಸಿಲು ಆವರಿಸಿಕೊಂಡಿದ್ದು, ಜೂನ್ ತಿಂಗಳಿನಲ್ಲೇ ಬೇಸಿಗೆಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಪ್ರವಾಸಿಗರ ಸುಳಿವಿಲ್ಲ, ಮತ್ತೊಂದೆಡೆ ಅಡಿಕೆ, ಕಾಫಿ, ಮೆಣಸು ಬೆಳೆ ಕುಂಠಿತವಾಗುವ ಆತಂಕ ಬೆಳೆಗಾರರಿಗೆ ಎದುರಾಗಿದೆ.

ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆ: ಬೆಳೆಗಾರರಲ್ಲಿ ಆತಂಕ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯಬೇಕಿದ್ದ ಸಮಯದಲ್ಲಿ ಸುಡು ಬಿಸಿಲು ಆವರಿಸಿಕೊಂಡಿದೆ. ಇದರಿಂದ ಕಾಫಿ, ಮೆಣಸು, ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ. ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿತ್ತು‌. ಮುಂಗಾರು ಪ್ರವೇಶವಾದ ದಿನದಿಂದ ಜಿಲ್ಲೆಯ ಮಲೆನಾಡು, ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ ಜಿಲ್ಲೆಯಾದ್ಯಂತ ಸರಿಯಾದ ಮಳೆಯಾಗಿಲ್ಲ. ಹೀಗಾಗಿ ಕಾಫಿ ಹೂವಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ಅಡಿಕೆ, ತೆಂಗು ಬೆಳೆಗೆ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

ಕಪ್ಪು ಬಂಗಾರ ಎಂದು ಕರೆಸಿಕೊಳ್ಳುವ ಕರಿ ಮೆಣಸಿಗೆ ಚಿಕ್ಕಮಗಳೂರು ಹೆಸರುವಾಸಿಯಾಗಿದೆ. ಆದರೆ ಮಳೆಯಾದ ಪರಿಣಾಮ ಮೆಣಸಿನ ಬಳ್ಳಿಗಳು ಒಣಗಲು ಆರಂಭಿಸಿದೆ. ಜೊತೆಗೆ ರೋಗ ಕೂಡ ಕಾಣಿಸಿಕೊಳ್ಳುತ್ತಿದೆ. ಹೂ ಬಿಡುವ ಸಮಯದಲ್ಲಿ ಬೇಕಾದಷ್ಟು ಮಳೆ ಆಗುತ್ತಿಲ್ಲ. ಹೀಗಾಗಿ ಮೆಣಸು, ಕಾಫಿಗೆ ಭಾರೀ ಹೊಡೆತ ನೀಡಿದೆ. ಮಳೆಯ ಪ್ರಮಾಣ ಕಡಿಮೆ ಆಗಿದ್ದರಿಂದ ಅರ್ಧದಷ್ಟು ಬೆಳೆ ಕುಂಠಿತವಾಗಿದ್ದು, ಇಳುವರಿ ಕೂಡ ಕಡಿಮೆಯಾಗಲಿದೆ.

ರೋಗದಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು

ಇನ್ನು ಜಿಲ್ಲೆಯಲ್ಲಿ ಕಾಫಿ ಜೊತೆಗೆ ಮೆಣಸು, ಅಡಿಕೆ, ತೆಂಗು ಪ್ರಮುಖ ಬೆಳೆಯಾಗಿದೆ. ಆದರೆ ಬೆಳೆಗಳ ಫಸಲಿಗೆ ಬೇಕಾದಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದರಿಂದ ಫಸಲು ಕುಂಠಿತವಾಗುವುದರ ಜೊತೆಗೆ ಕಾಣಿಸಿಕೊಳ್ಳುತ್ತಿರುವ ರೋಗದಿಂದ ಬೆಳೆ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

ಪ್ರವಾಸಿಗರಿಲ್ಲದೇ ಕಳೆಗುಂದಿದ ಪ್ರವಾಸಿ ತಾಣಗಳು

ಸಾಮಾನ್ಯವಾಗಿ ಮುಂಗಾರು ಅವಧಿಯಲ್ಲಿ ಧೋ ಎಂದು ಸುರಿಯುವ ಮಳೆ ಹಾಗೂ ಕಣ್ಣು ಹಾಯಿಸಿದಷ್ಟೂ ಕಾಣುವ ಹಚ್ಚಹಸಿರಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಚಿಕ್ಕಮಗಳೂರಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದರು. ಈ ಸಮಯದಲ್ಲಿ ಪ್ರವಾಸಿ ತಾಣಗಳೆಲ್ಲಾ ಜನರಿಂದ ತುಂಬಿ ತುಳುಕಬೇಕಿತ್ತು. ಆದರೆ, ಈ ಬಾರಿ ಮಳೆಯೇ ಇಲ್ಲದ ಕಾರಣ ಮಲೆನಾಡಿನ ಹಚ್ಚಹಸಿರಿನ ಸೌಂದರ್ಯ ಸಂಪೂರ್ಣ ಮಾಯವಾಗಿದೆ. ಹಸಿರು ಮಾಯವಾಗಿ ಒಣ ಹವೆ ಮೂಡಿರುವುದರಿಂದ ಪ್ರವಾಸಿಗರು ಇತ್ತ ತಲೆಹಾಕುತ್ತಿಲ್ಲ. ಪ್ರವಾಸಿಗರ ಸುಳಿವಿಲ್ಲದೆ ತಾಣಗಳು ಕಳೆಗುಂದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!