AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು

Chikkamagaluru New: ಸದ್ಯ ರಾಜ್ಯದಲ್ಲಿ ಮಳೆ ಇಲ್ಲದೇ ಎಲ್ಲೆಡೆ ಬರದ ಛಾಯೆ ಆವರಿಸಿದೆ. ಇತ್ತ ಹಚ್ಚಹಸಿರಿನಿಂದ ಕಂಗೊಳಿಸುವ ಚಿಕ್ಕಮಗಳೂರಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಮಲೆನಾಡಿನಲ್ಲಿ ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಿಂದ ಕಾಫಿ, ಅಡಿಕೆ, ಮೆಣಸು ಬೆಳೆ ಕುಂಠಿತಗೊಂಡಿದೆ. ಜೊತೆಗೆ ಪ್ರವಾಸಿಗರಿಲ್ಲದೇ ಪ್ರವಾಸಿ ತಾಣಗಳು ಕಳೆಗುಂದಿದೆ.

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು
ಬಿಸಿಲುImage Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 26, 2026 | 7:03 PM

Share

ಮುಖ್ಯಾಂಶಗಳು

  • ಮಳೆಗಾಲದ ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಬೇಸಿಗೆ ವಾತಾವರಣ
  • ಮುಂಗಾರು ವೈಫಲ್ಯದಿಂದ ಬೆಳೆಗಳ ಮೇಲೆ ಭಾರೀ ಪರಿಣಾಮ
  • ಕಾಫಿ, ಅಡಿಕೆ, ಮೆಣಸು ಬೆಳೆಗಾರರಿಗೆ ಆತಂಕ

ಚಿಕ್ಕಮಗಳೂರು, ಜೂನ್​​ 26: ಮಳೆಯನಾಡು ಹಾಗೂ ಕಾಫಿನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು (chikkamagaluru) ಈ ಸಂದರ್ಭದಲ್ಲಿ ಹಚ್ಚಹಸಿರು, ಮೋಡ ಕವಿದ ವಾತಾವರಣದಿಂದ ಕಂಗೊಳಿಸುವ ಸಮಯ. ಆದರೆ ಪ್ರಕೃಯ ಮುಸಿಗೆ ಈ ಬಾರಿ ಮುಂಗಾರು ಮಳೆ (Rain) ಸಂಪೂರ್ಣ ಕೈಕೊಟ್ಟಿದೆ. ಮಳೆ ಬದಲಿಗೆ ಸುಡುಬಿಸಿಲು ಆವರಿಸಿಕೊಂಡಿದ್ದು, ಜೂನ್ ತಿಂಗಳಿನಲ್ಲೇ ಬೇಸಿಗೆಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಪ್ರವಾಸಿಗರ ಸುಳಿವಿಲ್ಲ, ಮತ್ತೊಂದೆಡೆ ಅಡಿಕೆ, ಕಾಫಿ, ಮೆಣಸು ಬೆಳೆ ಕುಂಠಿತವಾಗುವ ಆತಂಕ ಬೆಳೆಗಾರರಿಗೆ ಎದುರಾಗಿದೆ.

ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆ: ಬೆಳೆಗಾರರಲ್ಲಿ ಆತಂಕ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯಬೇಕಿದ್ದ ಸಮಯದಲ್ಲಿ ಸುಡು ಬಿಸಿಲು ಆವರಿಸಿಕೊಂಡಿದೆ. ಇದರಿಂದ ಕಾಫಿ, ಮೆಣಸು, ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ. ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿತ್ತು‌. ಮುಂಗಾರು ಪ್ರವೇಶವಾದ ದಿನದಿಂದ ಜಿಲ್ಲೆಯ ಮಲೆನಾಡು, ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ ಜಿಲ್ಲೆಯಾದ್ಯಂತ ಸರಿಯಾದ ಮಳೆಯಾಗಿಲ್ಲ. ಹೀಗಾಗಿ ಕಾಫಿ ಹೂವಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ಅಡಿಕೆ, ತೆಂಗು ಬೆಳೆಗೆ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

ಕಪ್ಪು ಬಂಗಾರ ಎಂದು ಕರೆಸಿಕೊಳ್ಳುವ ಕರಿ ಮೆಣಸಿಗೆ ಚಿಕ್ಕಮಗಳೂರು ಹೆಸರುವಾಸಿಯಾಗಿದೆ. ಆದರೆ ಮಳೆಯಾದ ಪರಿಣಾಮ ಮೆಣಸಿನ ಬಳ್ಳಿಗಳು ಒಣಗಲು ಆರಂಭಿಸಿದೆ. ಜೊತೆಗೆ ರೋಗ ಕೂಡ ಕಾಣಿಸಿಕೊಳ್ಳುತ್ತಿದೆ. ಹೂ ಬಿಡುವ ಸಮಯದಲ್ಲಿ ಬೇಕಾದಷ್ಟು ಮಳೆ ಆಗುತ್ತಿಲ್ಲ. ಹೀಗಾಗಿ ಮೆಣಸು, ಕಾಫಿಗೆ ಭಾರೀ ಹೊಡೆತ ನೀಡಿದೆ. ಮಳೆಯ ಪ್ರಮಾಣ ಕಡಿಮೆ ಆಗಿದ್ದರಿಂದ ಅರ್ಧದಷ್ಟು ಬೆಳೆ ಕುಂಠಿತವಾಗಿದ್ದು, ಇಳುವರಿ ಕೂಡ ಕಡಿಮೆಯಾಗಲಿದೆ.

ರೋಗದಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು

ಇನ್ನು ಜಿಲ್ಲೆಯಲ್ಲಿ ಕಾಫಿ ಜೊತೆಗೆ ಮೆಣಸು, ಅಡಿಕೆ, ತೆಂಗು ಪ್ರಮುಖ ಬೆಳೆಯಾಗಿದೆ. ಆದರೆ ಬೆಳೆಗಳ ಫಸಲಿಗೆ ಬೇಕಾದಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದರಿಂದ ಫಸಲು ಕುಂಠಿತವಾಗುವುದರ ಜೊತೆಗೆ ಕಾಣಿಸಿಕೊಳ್ಳುತ್ತಿರುವ ರೋಗದಿಂದ ಬೆಳೆ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

ಪ್ರವಾಸಿಗರಿಲ್ಲದೇ ಕಳೆಗುಂದಿದ ಪ್ರವಾಸಿ ತಾಣಗಳು

ಸಾಮಾನ್ಯವಾಗಿ ಮುಂಗಾರು ಅವಧಿಯಲ್ಲಿ ಧೋ ಎಂದು ಸುರಿಯುವ ಮಳೆ ಹಾಗೂ ಕಣ್ಣು ಹಾಯಿಸಿದಷ್ಟೂ ಕಾಣುವ ಹಚ್ಚಹಸಿರಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಚಿಕ್ಕಮಗಳೂರಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದರು. ಈ ಸಮಯದಲ್ಲಿ ಪ್ರವಾಸಿ ತಾಣಗಳೆಲ್ಲಾ ಜನರಿಂದ ತುಂಬಿ ತುಳುಕಬೇಕಿತ್ತು. ಆದರೆ, ಈ ಬಾರಿ ಮಳೆಯೇ ಇಲ್ಲದ ಕಾರಣ ಮಲೆನಾಡಿನ ಹಚ್ಚಹಸಿರಿನ ಸೌಂದರ್ಯ ಸಂಪೂರ್ಣ ಮಾಯವಾಗಿದೆ. ಹಸಿರು ಮಾಯವಾಗಿ ಒಣ ಹವೆ ಮೂಡಿರುವುದರಿಂದ ಪ್ರವಾಸಿಗರು ಇತ್ತ ತಲೆಹಾಕುತ್ತಿಲ್ಲ. ಪ್ರವಾಸಿಗರ ಸುಳಿವಿಲ್ಲದೆ ತಾಣಗಳು ಕಳೆಗುಂದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು