AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಹುಡುಗಿ ಪಕ್ಕ ಕುಳಿತ್ತಿದ್ದಕ್ಕೆ ಹಿಂದೂ ಯುವಕರ ಮೇಲೆ ಹಲ್ಲೆ

ಕರ್ನಾಟಕದಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರು ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಸಹ ಮತ್ತೆ ಮತ್ತೆ ಮರುಕಳಿಸುತ್ತಲೇ ಇವೆ. ಹೀಗಾಗಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಸಹ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದಾಗ ಈ ನೈತಿಕ ಪೊಲೀಸ್ ಗಿರಿ ಬಗ್ಗೆ ಪ್ರಸ್ತಾಪಿಸಿ, ಇದಕ್ಕೆ ಕಡಿವಾಣ ಹಾಕಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಆದರೂ ನಿಲ್ಲುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಹುಡುಗಿ ಪಕ್ಕ ಕುಳಿತ್ತಿದ್ದಕ್ಕೆ ಹಿಂದೂ ಯುವಕರ ಮೇಲೆ ಹಲ್ಲೆ
Sahyadri College Moral Policing
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Feb 27, 2026 | 8:20 PM

Share

ಚಿಕ್ಕಮಗಳೂರು, (ಫೆಬ್ರವರಿ 27):   ಚಿಕ್ಕಮಗಳೂರಿನಲ್ಲಿ (Chikkamagaluru:) ಮತ್ತೊಂದು ನೈತಿಕ ಪೊಲೀಸ್ ಗಿರಿ (moral policing) ನಡೆದಿದೆ. ಮೊನ್ನೇ ಅಷ್ಟೇ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಹೋಗುತ್ತಿದ್ದಾಗ ದಲಿತ ಕ್ರಿಶ್ಚಿಯನ್ ಬಾಲಕನೋರ್ವನನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನೇನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಿದೆ. ಚಿಕ್ಕಮಗಳೂರು ನಗರದ ಸಹ್ಯಾದ್ರಿ ಕಾಲೇಜು ಬಸ್‌ನಲ್ಲಿ ಮುಸ್ಲಿಂ (Muslim) ವಿದ್ಯಾರ್ಥಿನಿಯ ಪಕ್ಕ ಕುಳಿತಿದ್ದಕ್ಕೆ ಹಿಂದೂ (Hindu) ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ಮಾಡಲಾಗಿದೆ.

ಇಂದು (ಫೆಬ್ರವರಿ 27) ಬೆಳಗ್ಗೆ ಓರ್ವ ಮುಸ್ಲಿಂ ಹುಡುಗಿ ಹಾಗೂ ಇಬ್ಬರು ಹಿಂದೂ ಹುಡುಗರು ಬಸ್​​ನ ಒಂದೇ ಸೀಟಿನಲ್ಲಿ ಕುಳಿತು ಕಾಲೇಜಿಗೆ ಆಗಮಿಸಿದ್ದರು. ಹೀಗಾಗಿ ಮುಸ್ಲಿಂ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ ಎಂದು ಯೋಗೇಶ್ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಇನ್ನು ಜಗಳ ಬಿಡಿಸಲು ಹೋದ ಜಯಂತ್‌ ಮೇಲೂ ಸಹ ಸಾಲಿದ್‌, ರಶೀದ್‌ ಎನ್ನುವ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ಬೈಕ್ ಅಡ್ಡಗಟ್ಟಿ ದಲಿತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

ಎಲ್ಲರೂ ಒಂದೇ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಯೋಗೇಶ್ ಹಾಗೂ ಜಯಂತ್‌, ಮುಸ್ಲಿಂ ವಿದ್ಯಾರ್ಥಿನಿ ಸ್ನೇಹಿತರಾಗಿದ್ದು, ಕಾಲೇಜು ಬಸ್​​ನಲ್ಲೇ ಒಂದೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಇದರಿಂದ ಕೆರಳಿದ ಸಾಲಿದ್‌ ಹಾಗೂ ರಶೀದ್‌,  ಯೋಗೇಶ್ ಮತ್ತು ಜಯಂತ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನು ಈ ಗಲಾಟೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ, ಬಸವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಬಸವನಹಳ್ಳಿ ಪೊಲೀಸರು, ಯೋಗೇಶ್, ಜಯಂತ್ ,ರಶೀದ್ ನನ್ನ ಠಾಣೆಗೆ ಕರೆದೊಯ್ದ ವಿಚಾರಣೆಗೊಳಪಡಿಸಿದ್ದಾರೆ.

ಒಂದೇ ಕಾಲೇಜಿನಲ್ಲಿ ಓದುತ್ತಿದ್ದರೆ ಸಾಮಾನ್ಯವಾಗಿ ಎಲ್ಲರೂ ಒಂದೇ ಎನ್ನುವ ಭಾವನೆ ಇರುತ್ತೆ. ಯಾವುದೇ ಭೇದ-ಭಾವ ಇಲ್ಲದ ಗೆಳೆತನ, ಒಬ್ಬರಿಗೊಬ್ಬರ ನಡುವೆ ಅನ್ಯೂನ್ಯತೆ ಇರುತ್ತೆ. ಇದನ್ನೇ ಕೆಲವರು ತಪ್ಪಾಯಿ ಅರ್ಥೈಸಿಕೊಂಡು ಪ್ರಶ್ನಿಸಿವುದು ವಿಪರ್ಯಾಸವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್