AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು; ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ

ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ.

ಚಿಕ್ಕಮಗಳೂರು; ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ
ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 21, 2023 | 10:53 AM

Share

ಚಿಕ್ಕಮಗಳೂರು, ನ.21: ಕುಟುಂಬ ಸಮಾರಂಭದಲ್ಲಿ ಬಿರಿಯಾನಿ (Biryani) ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ (Kadur Government Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು ಹಾಸ್ಟೆಲ್​ ವಾರ್ಡನ್​ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಬಿರಿಯಾನಿ ತಿಂದು ಆಸ್ಪತ್ರೆ ಸೇರಿದ ಗ್ರಾಮಸ್ಥರು

ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಸ್ವಸ್ಥರಲ್ಲಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ರಾಮನಗರ: ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆ

ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್​ನ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆ ಹಾಸ್ಟೆಲ್​ ವಾರ್ಡನ್​ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಆಹಾರ ನೀಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕಳಪೆ ಆಹಾರ ತಿಂದು ಆರೋಗ್ಯಕ್ಕೆ ಸಮಸ್ಯೆಯಾದರೆ ಯಾರು ಹೊಣೆ. ಕೂಡಲೇ ವಾರ್ಡನ್​ ಅಮಾನತುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?