AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ. ಎರಡೂ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದರಿಂದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ
ಬಸ್​ ಅಪಘಾತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Dec 10, 2023 | 3:18 PM

Share

ಚಿಕ್ಕಮಗಳೂರು , (ಡಿಸೆಂಬರ್ 10): ಎರಡು ಸರ್ಕಾರಿ ಬಸ್ಸುಗಳ ( Two KSRTC Buses) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು (Chikkamagaluru ) ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲೂ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ಗಂಭೀರ ಗಾಯವಾಗಿದೆ. ಇನ್ನು ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಬಳಕಿನ ಮೈ ಕಟ್ಟಿನ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹಾವು ಬಳುಕಿನ ಮೈಕಟ್ಟಿನ ರಸ್ತೆಯಾಗಿರುವುದರಿಂದ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ಸಿನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್