AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತ: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು

ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ನೂರಾರು ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ರಾಸುಗಳು ಇವೆ. ರೈತರು ಕೂಡ ರಾಸುಗಳನ್ನ ಬೀದಿಯಲ್ಲಿ ಬಿಟ್ಟಿದ್ದಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ರಾಸುಗಳು ಪ್ರಾಣ ಕಳೆದುಕೊಳ್ಳುತ್ತಿವೆ.

ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತ: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು
ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು
TV9 Web
| Edited By: ಆಯೇಷಾ ಬಾನು|

Updated on:Sep 04, 2022 | 10:13 PM

Share

ಚಿಕ್ಕಮಗಳೂರು: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಇಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ.

ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು-ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ. ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಿದ್ದ ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ರಾಸುಗಳು ರಸ್ತೆ ಮಧ್ಯೆ ಮಲಗುವುದರಿಂದ ರಾತ್ರಿ ವೇಳೆ ವಾಹನ ಸಾವರರು ವೇಗವಾಗಿ ಹೋಗುವುದರಿಂದ ಒಂದೆಡೆ ರಾಸುಗಳು ಸಾವನ್ನಪ್ಪುತ್ತಿವೆ. ಮತ್ತೊಂದೆಡೆ ಅಪಘಾತಗಳನ್ನ ತಪ್ಪಿಸಲು ಹೋಗಿ ಕಾರು-ಬೈಕ್‍ಗಳು ಅಪಘಾತಗಳಾಗಿ ವಾಹನ ಸವಾರರು ಗಾಯಾಳುಗಳಾಗುತ್ತಿದ್ದಾರೆ.

ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ನೂರಾರು ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ರಾಸುಗಳು ಇವೆ. ರೈತರು ಕೂಡ ರಾಸುಗಳನ್ನ ಬೀದಿಯಲ್ಲಿ ಬಿಟ್ಟಿದ್ದಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ರಾಸುಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ ಅಥವಾ ಗ್ರಾಮ ಪಂಚಾಯಿತಿಯೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರ ಬಿಡಾಡಿ ದನಗಳನ್ನ ಗೋಶಾಲೆಗೆ ಸೇರಿಸಬೇಕೆಂದು ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜಾನುವಾರುಗಳ ಮೇವಿಗೆ ಇದ್ದ ಗೋಮಾಳಗಳು ಒತ್ತುವರಿಯಾದ ಹಿನ್ನೆಲೆ ರಾಸುಗಳು ಎಲ್ಲೆಂದರಲ್ಲಿ ಮೇಯಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿವೆ ಎಂದು ಸ್ಥಳೀಯರು ಗೋಮಾಳ ಒತ್ತುವರಿದಾರರ ವಿರುದ್ಧವೂ ಕಿಡಿಕಾರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:13 pm, Sun, 4 September 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ