AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಸಾವಿನ ಸ್ಪಾಟ್ ಆಗುತ್ತಿದೆ ಮುಳ್ಳಯ್ಯನಗಿರಿ ಶಿಖರ; ಸಾಲು ಸಾಲು ಅಪಘಾತ, ಪ್ರಪಾತಕ್ಕೆ ಬೀಳುತ್ತಿವೆ ಪ್ರವಾಸಿಗರ ಕಾರು

ಪ್ರಕೃತಿ ಸೌಂದರ್ಯದ ಖನಿಜವನ್ನ ತನ್ನೊಳಗೆ ಇಟ್ಟುಕೊಂಡಿರುವ ಪ್ರಸಿದ್ಧ ಶಿಖರವದು, ಈ ಶಿಖರ ಅಂದ್ರೆ, ಪ್ರವಾಸಿಗರಿಗೆ ಅಚ್ಚು ಮೆಚ್ಚು. ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ದಂಡು, ಆ ಶಿಖರಕ್ಕೆ ಹರಿದು ಬರುತ್ತೆ. ಆ ಶಿಖರದ ತುತ್ತ ತುದಿಗೆ ಪ್ರವಾಸಿಗರು ತಲುಪಬೇಕಾದ್ರೆ, ಸಾವಿನ ಸವಾಲನ್ನು ಸ್ವೀಕರಿಸಬೇಕು. ಅಷ್ಟಕ್ಕೂ ಪ್ರವಾಸಿಗರು ಶಿಖರಕ್ಕೆ ತಲುಪಬೇಕಾದ್ರೆ, ಎದುರಾಗುವ ಸಾವಿನ ಸವಾಲು ಏನು ಅಂತೀರಾ? ನೀವೇ ನೋಡಿ.

ಪ್ರವಾಸಿಗರ ಸಾವಿನ ಸ್ಪಾಟ್ ಆಗುತ್ತಿದೆ ಮುಳ್ಳಯ್ಯನಗಿರಿ ಶಿಖರ; ಸಾಲು ಸಾಲು ಅಪಘಾತ, ಪ್ರಪಾತಕ್ಕೆ ಬೀಳುತ್ತಿವೆ ಪ್ರವಾಸಿಗರ ಕಾರು
ಮುಳಯ್ಯನಗಿರಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 21, 2023 | 1:42 PM

Share

ಚಿಕ್ಕಮಗಳೂರು: ತಣ್ಣನೆಯ ಗಾಳಿ ಹಚ್ಚ ಹಸಿರಿನಿಂದ ಸದಾ ಕಂಗೊಳಿಸುವ ಪ್ರಕೃತಿ ಸೌಂದರ್ಯ. ಎತ್ತರದ ಶಿಖರದ ಮೇಲಿನಿಂದ ಪ್ರಕೃತಿ ಸೌಂದರ್ಯ ಸವಿಯುವ ಬಯಕೆ ಪ್ರತಿ ಪ್ರವಾಸಿಗರನ್ನು ಕಾಡುತ್ತೆ. ಅದರಲ್ಲೂ ಜಿಲ್ಲೆಯ ಮುಳ್ಳಯ್ಯನಗಿರಿ(Mullayanagiri)ಚಂದ್ರದ್ರೋಣ ಪರ್ವತದ ಸಾಲುಗಳು ಪ್ರವಾಸಿಗರ ಹಾಟ್ ಸ್ಪಾಟ್. ನಿತ್ಯವೂ ಮುಳ್ಳಯ್ಯನಗಿರಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದತ್ತಾಪೀಠ ಮಾಣಿಕ್ಯದಾರಕ್ಕೆ ಸಾವಿರಾರು ಪ್ರವಾಸಿಗರು ರಾಜ್ಯ ಹೊರ ದೇಶದಿಂದ ಕೂಡ ಬರುತ್ತಾರೆ. ವೀಕೆಂಡ್​ನಲ್ಲಂತೂ ಪ್ರವಾಸಿಗರ ಜಾತ್ರೆಯೆ ನೆರೆದಿರುತ್ತೆ. ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ತಲುಪಬೇಕಾದರೆ ಪ್ರವಾಸಿಗರು ಸಾಲು ಸಾಲು ಸವಾಲನ್ನು ಎದುರಿಸಬೇಕಾಗಿದೆ. ಸಾವಿರಾರು ಅಡಿ ಎತ್ತರದ ಮೇಲಿರುವ ಶಿಖರದ ರಸ್ತೆಯಲ್ಲಿ ಸಂಚರಿಸಬೇಕಾದರೆ ಪ್ರವಾಸಿಗರು ಜೀವವನ್ನು ಕೈಯಲ್ಲಿ ಹಿಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಡೆಗೋಡೆಗಳೆ ಇಲ್ಲದ ಸಾವಿರಾರು ಅಡಿ ಪ್ರಪಾತದ ರಸ್ತೆಯಲ್ಲಿ ಜೀವದ ಹಂಗನ್ನ ತೊರೆದು ಪ್ರವಾಸಿಗರು ಸಂಚರಿಸುತ್ತಿದ್ದಾರೆ.

ನೂರಾರು ಅಡಿ ಪ್ರಪಾತದಿಂದ ಉರುಳುತ್ತಿರುವ ಪ್ರವಾಸಿಗರ ವಾಹನಗಳು

ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಸ್ಥಾನವಾದ ಚಂದ್ರದ್ರೋಣ ಪರ್ವತ ಮತ್ತು ಮುಳ್ಳಯ್ಯನಗಿರಿ ಶಿಖರಗಳಿಗೆ ಪ್ರವಾಸಿಗರು ಆಗಮಿಸುತ್ತಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ. ಸಾವಿರ ಅಡಿ ಎತ್ತರದ ರಸ್ತೆಗಳಲ್ಲಿ ಪ್ರವಾಸಿಗರು ವಾಹನ ಚಾಲನೆ ಮಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೇಕಾಬಿಟ್ಟಿಯಾಗಿ ತಡೆಗೋಡೆಗಳನ್ನು ಕೆಲವು ಭಾಗದಲ್ಲಿ ನಿರ್ಮಿಸಿದ್ದು, ಇನ್ನುಳಿದಂತೆ ತಡೆಗೋಡೆಗಳನ್ನು ನಿರ್ಮಿಸಿಲ್ಲ. ಇದರಿಂದ ಕಳೆದ ಮೂರು ದಿನದ ಹಿಂದೆ ಮೈಸೂರು ಮೂಲದ ಪ್ರವಾಸಿಗರಿದ್ದ ಕಾರು 230 ಅಡಿ ಆಳದ ಪ್ರಪಾತಕ್ಕೆ ಉರುಳಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದ್ರೆ, ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ನಿತ್ಯವೂ ಪ್ರವಾಸಿ ವಾಹನಗಳ ಅಪಘಾತ ಸಂಭವಿಸುತ್ತಾ ಇದ್ರು, ಜಿಲ್ಲಾಡಳಿತ ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ.

ಇದನ್ನೂ ಓದಿ:ರಾಜ್ಯದ ಅತಿ ಎತ್ತರದ ಮುಳ್ಳಯ್ಯನಗಿರಿಗೆ, ಹಸಿರು ಸಿರಿಯನ್ನೇ ಹೊದ್ದು ಮಲಗಿರೋ ದತ್ತಪೀಠಕ್ಕೆ ನೋ ಎಂಟ್ರಿ! 4 ದಿನ ನಿರ್ಬಂಧ ಯಾಕೆ?

ಮುಳ್ಳಯ್ಯನಗಿರಿ ಮತ್ತು ಚಂದ್ರದ್ರೋಣ ಪರ್ವತದ ರಸ್ತೆಯ ಕಾಮಗಾರಿಗಾಗಿ ಕೋಟ್ಯಾಂತರ ರೂಪಾಯಿ ಹಣವನ್ನ ಖರ್ಚು ಮಾಡಲಾಗಿದೆ. ತಡೆಗೋಡೆಗಳೇ ಇಲ್ಲದ ರಸ್ತೆಯಲ್ಲಿ ಪ್ರವಾಸಿಗರು ವಾಹನ ಚಲಾಯಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು. ಒಂದು ಕ್ಷಣ ಚಾಲಕ ‌ಮೈ ಮರೆತರೂ ನೂರಾರು ಅಡಿ ಪ್ರಪಾತಕ್ಕೆ ವಾಹನಗಳು ಉರುಳುತ್ತವೆ. ನಿರಂತರವಾಗಿ ಸ್ಥಳೀಯರು, ಪ್ರವಾಸಿಗರು ರಸ್ತೆಯಲ್ಲಿ ತಡೆಗೋಡೆಗಳನ್ನು ನಿರ್ಮಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ರು, ಯಾವುದೇ ಪ್ರಯೋಜನವಾಗಿಲ್ಲ. ಇನ್ನಷ್ಟು ಜೀವಗಳು ಹೋಗುವ ಮುನ್ನ ಜಿಲ್ಲಾಡಳಿತ ಇತ್ತ ಗಮನಹರಿಸಿ ತಡೆಗೋಡೆಗಳನ್ನ ನಿರ್ಮಿಸಬೇಕಿದೆ.

ವರದಿ: ಅಶ್ವಿತ್ ಟಿವಿ9 ಚಿಕ್ಕಮಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ