AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ

ಶೃಂಗೇರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರಿಗೆ ಅತ್ಯಾಚಾರ ಆರೋಪದ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಆರೋಫಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ ಇದೀಗ ಇಬ್ಬರು ಆರೋಪಿಗಳಿಗೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ
ಡಿ.ಎನ್ ಜೀವರಾಜ್, ಮಾಜಿ ಶಾಸಕ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 10, 2023 | 10:49 AM

Share

ಚಿಕ್ಕಮಗಳೂರು, (ಅಕ್ಟೋಬರ್ 10): ಬಿಜೆಪಿ ನಾಯಕ, ಶೃಂಗೇರಿ ಮಾಜಿ ಶಾಸಕ ಡಿ.ಎನ್ ಜೀವರಾಜ್ (DN Jeevaraj) ಅವರಿಗೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಇಬ್ಬರಿಗೂ ಎನ್​ಆರ್​ ಪುರದ ಜೆಎಂಎಫ್​ಸಿ ನ್ಯಾಯಾಲಯ ಎರಡು ವರ್ಷ ಸಜೆ, 5000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಮನು ,ಅರಣ್ಯ ಶಿಕ್ಷೆಗೊಳಗಾದ ಆರೋಪಿಗಳು.

ಮೊದಲು ಮನು ಅರಣ್ಯ. ಎನ್ನುವರು 2013 ಆಗಸ್ಟ್ 20 ರಂದು ಎನ್​ಆರ್​ ಪುರ‌‌ ಪೊಲೀಸ್ ಠಾಣೆಯಲ್ಲಿ ಜೀವರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಬಳಿಕ ಅಂದಿನ ಸರ್ಕಾರ ಅತ್ಯಾಚಾರ ,ಬ್ಲಾಕ್‌ಮೇಲ್ ಪ್ರಕರಣವನ್ನ CID ಗೆ ವಹಿಸಿತ್ತು. ನಂತರ 2014 ರಲ್ಲಿ ಎನ್​ಆರ್ ಪುರ ಕೋರ್ಟ್, ಆರೋಪದಲ್ಲಿ ಹುರುಳಿಲ್ಲ ಎಂದು ಕೇಸ್ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೀವರಾಜ್ ನಿರಪರಾಧಿ ಎಂದು ಸಾಬೀತು ಆಗಿತ್ತು.

ಇದನ್ನೂ ಓದಿ: ಧಾರವಾಡ: ಎಸ್​ಬಿಎಂ ಬ್ಯಾಂಕ್​ಗೆ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

ಇದಾದ ಬಳಿಕ 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದಾರೆ. ಇಲ್ಲದಿದ್ದರೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೀವರಾಜ್ ಅವರು ಮನು ಹಾಗೂ ಅರಣ್ಯ ವಿರುದ್ಧ ದೂರು ದಾಖಲಿಸಿದ್ದರು. 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ, ಇದೀಗ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!