AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ

ಶೃಂಗೇರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರಿಗೆ ಅತ್ಯಾಚಾರ ಆರೋಪದ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಆರೋಫಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ ಇದೀಗ ಇಬ್ಬರು ಆರೋಪಿಗಳಿಗೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ
ಡಿ.ಎನ್ ಜೀವರಾಜ್, ಮಾಜಿ ಶಾಸಕ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 10, 2023 | 10:49 AM

Share

ಚಿಕ್ಕಮಗಳೂರು, (ಅಕ್ಟೋಬರ್ 10): ಬಿಜೆಪಿ ನಾಯಕ, ಶೃಂಗೇರಿ ಮಾಜಿ ಶಾಸಕ ಡಿ.ಎನ್ ಜೀವರಾಜ್ (DN Jeevaraj) ಅವರಿಗೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಇಬ್ಬರಿಗೂ ಎನ್​ಆರ್​ ಪುರದ ಜೆಎಂಎಫ್​ಸಿ ನ್ಯಾಯಾಲಯ ಎರಡು ವರ್ಷ ಸಜೆ, 5000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಮನು ,ಅರಣ್ಯ ಶಿಕ್ಷೆಗೊಳಗಾದ ಆರೋಪಿಗಳು.

ಮೊದಲು ಮನು ಅರಣ್ಯ. ಎನ್ನುವರು 2013 ಆಗಸ್ಟ್ 20 ರಂದು ಎನ್​ಆರ್​ ಪುರ‌‌ ಪೊಲೀಸ್ ಠಾಣೆಯಲ್ಲಿ ಜೀವರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಬಳಿಕ ಅಂದಿನ ಸರ್ಕಾರ ಅತ್ಯಾಚಾರ ,ಬ್ಲಾಕ್‌ಮೇಲ್ ಪ್ರಕರಣವನ್ನ CID ಗೆ ವಹಿಸಿತ್ತು. ನಂತರ 2014 ರಲ್ಲಿ ಎನ್​ಆರ್ ಪುರ ಕೋರ್ಟ್, ಆರೋಪದಲ್ಲಿ ಹುರುಳಿಲ್ಲ ಎಂದು ಕೇಸ್ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೀವರಾಜ್ ನಿರಪರಾಧಿ ಎಂದು ಸಾಬೀತು ಆಗಿತ್ತು.

ಇದನ್ನೂ ಓದಿ: ಧಾರವಾಡ: ಎಸ್​ಬಿಎಂ ಬ್ಯಾಂಕ್​ಗೆ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

ಇದಾದ ಬಳಿಕ 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದಾರೆ. ಇಲ್ಲದಿದ್ದರೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೀವರಾಜ್ ಅವರು ಮನು ಹಾಗೂ ಅರಣ್ಯ ವಿರುದ್ಧ ದೂರು ದಾಖಲಿಸಿದ್ದರು. 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ, ಇದೀಗ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ