ಮತ್ತೊಂದು ಕುಣಿಕೆ ಸಿದ್ದಗೊಳಿಸಿದ ಸಿದ್ದರಾಮಯ್ಯ ಸರ್ಕಾರ: ಗೋರಿ ಅಗೆದವರ ವಿರುದ್ಧದ ಕೇಸ್ ರೀಓಪನ್​ ಆಯ್ತು

ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಮತ್ತೊಂದು ಕುಣಿಕೆ ಸಿದ್ದಗೊಳಿಸಿದ ಸಿದ್ದರಾಮಯ್ಯ ಸರ್ಕಾರ: ಗೋರಿ ಅಗೆದವರ ವಿರುದ್ಧದ ಕೇಸ್ ರೀಓಪನ್​ ಆಯ್ತು
ಗೋರಿ ಅಗೆದವರ ವಿರುದ್ಧದ ಕೇಸ್ ರೀಓಪನ್​ ಆಯ್ತು
Edited By: ಸಾಧು ಶ್ರೀನಾಥ್​

Updated on: Jan 04, 2024 | 3:47 PM

ಚಿಕ್ಕಮಗಳೂರು, ಜನವರಿ 04: ಸಮಾಧಿ ಸೇರಿದ್ದ ಹಳೆಯ ಕೇಸುಗಳು ಮತ್ತೆ ಸದ್ದು (skeletons out of the cupboard) ಮಾಡತೊಡಗಿವೆ. ಸಿದ್ದರಾಮಯ್ಯ (Siddaramaiah) ನೇತೃತ್ವದ ಹಾಲಿ ಕಾಂಗ್ರೆಸ್ ಸರ್ಕಾರ ಹಳೆಯ ಕೇಸ್​ಗಳ ರೀಓಪನ್ ಮಾಡಿಸುವ ಕೈಂಕರ್ಯವನ್ನು ಮುಂದುವರಿಸಿದೆ. 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು (Baba Budangiri dargah) ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.

ಇದರೊಂದಿಗೆ 7 ವರ್ಷದ ಬಳಿಕ ಅಂದಿನ ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್ ಅನ್ನು ರಾಜ್ಯ ಸರ್ಕಾರ ರೀ ಓಪನ್ ಮಾಡಿಸಿದಂತಾಗಿದೆ. ಗಮನಾರ್ಹವೆಂದರೆ ಬಿಜೆಪಿ ( BJP) ಸರ್ಕಾರದ ಅವಧಿಯಲ್ಲಿ ಈ ಕೇಸ್​​ ಕ್ಲೋಸ್ ಆಗಿತ್ತು. 2017ರ ಡಿಸೆಂಬರ್​ 3ರಂದು ದತ್ತಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಿದ್ದ ಆರೋಪವಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. IPC ಸೆಕ್ಷನ್ 143,447,427, 298,504,506,114,353, ಕೇಸ್ ದಾಖಲಾಗಿತ್ತು.

Also Read: ದತ್ತಪೀಠ ವಿವಾದ – ವ್ಯವಸ್ಥಾಪನ ಸಮಿತಿ ವಜಾ ಮನವಿ ಬೆನ್ನಲ್ಲೇ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ ಪಟ್ಟು

ಭಜರಂಗದಳದ ಒಟ್ಟು 14 ಕಾರ್ಯಕರ್ತರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ. ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.)

Published On - 3:10 pm, Thu, 4 January 24

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us