AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕಾಫಿನಾಡು ಚಿಕ್ಕಮಗಳೂರಲ್ಲಿ ಜಲಸ್ಪೋಟ; ಒಂದು ಎಕರೆ ಕಾಫಿ ಮತ್ತು ಅಡಿಕೆ ತೋಟ ನಾಶ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ತಾಲೂಕಿನ ಅರೇನೂರು ಗ್ರಾಮದಲ್ಲಿ  ಏಕಾಏಕಿ ಮಳೆಯಾಗಿ ಒಂದು ಎಕರೆ ಕಾಫಿತೋಟ ಮತ್ತು ಅಡಿಕೆ ತೋಟ ಕೊಚ್ಚಿಕೊಂಡು ಹೋಗಿದೆ.

Karnataka Rain: ಕಾಫಿನಾಡು ಚಿಕ್ಕಮಗಳೂರಲ್ಲಿ ಜಲಸ್ಪೋಟ; ಒಂದು ಎಕರೆ ಕಾಫಿ ಮತ್ತು ಅಡಿಕೆ ತೋಟ ನಾಶ
ಚಿಕ್ಕಮಗಳೂರು ಕೊಚ್ಚಿ ಹೋದ ಕಾಫಿ ತೋಟ
TV9 Web
| Edited By: |

Updated on:Jul 11, 2022 | 4:04 PM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು (Chikkamagaluru) ತಾಲೂಕಿನ ಅರೇನೂರು ಗ್ರಾಮದಲ್ಲಿ  ಏಕಾಏಕಿ ಮಳೆಯಾಗಿ ಒಂದು ಎಕರೆ ಕಾಫಿತೋಟ (Coffee Estate) ಮತ್ತು ಅಡಿಕೆ ತೋಟ (Nut Plantation) ಕೊಚ್ಚಿಕೊಂಡು ಹೋಗಿದೆ.  ರಾಮು-ವಸಂತಿ ದಂಪತಿಗೆ ಸೇರಿದ ಕಾಫಿ ತೋಟ ಸಂಪೂರ್ಣ ನಾಶವಾಗಿದ್ದು,  ಬೃಹತ್ ಬಂಡೆಗಳು, ದೊಡ್ಡ ದೊಡ್ಡ ಮರಗಳು, ಮನೆ ಬಳಿಯೇ ಬಂದು ನಿಂತಿವೆ. ಜಲ ಸ್ಫೋಟದ ಹೊಡೆತಕ್ಕೆ ಬಡ ಕುಟುಂಬ ನಲುಗಿ ಹೋಗಿದೆ.

ತೋಟ ಕಳೆದುಕೊಂಡ ಮಹಿಳೆ ಮಾತನಾಡಿ ಕಷ್ಟಪಟ್ಟು ಕೂಲಿ ನಾಲಿ ಮಾಡಿ ಬೆಳೆಸಿದ ಕಾಫಿ ತೋಟ ಕ್ಷಣ ಮಾತ್ರದಲ್ಲಿ ನಾಶವಾಗಿದೆ. 30 ವರ್ಷಗಳ ಹಿಂದೆ ತಲೆ ಮೇಲೆ ಮಣ್ಣು ಹೊತ್ತು ತಂದು ತೋಟ ಮಾಡಿದ್ದೆ. ಇದೀಗ ಎಲ್ಲವೂ ಮಳೆಯಿಂದ ಕೊಚ್ಚಿಕೊಂಡು ಹೋಗಿದೆ ಎಂದು ಮಹಿಳೆ ಕಣ್ಣೀರಾಕಿದ್ದಾರೆ.

ಟಿವಿ9 ಜೊತೆ ರೈತ ಧರ್ಮೇಗೌಡ ಮಾತನಾಡಿ ಸ್ಪೋಟಗೊಳ್ಳುವ ವೇಳೆ ಇಡೀ ಊರೇ ಬೆಚ್ಚಿ ಬೀಳುವ ಹಾಗೆ ಶಬ್ದ ಕೇಳಿಸಿತು. ತೋಟಕ್ಕೆ ಬಂದು ನೋಡಿದರೆ ಪ್ರವಾಹದ ರೀತಿಯಲ್ಲಿ ತೋಟದಲ್ಲಿ ನೀರು ಹರಿಯುತ್ತಿತ್ತು. ನನ್ನ ಜೀವಮಾನದಲ್ಲೇ ಈ ರೀತಿಯ ಘಟನೆಯನ್ನು ಕಂಡಿಲ್ಲ ಎಂದು  ಹೇಳಿದರು.

ಘಟನಾ ಸ್ಥಳಕ್ಕೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಭೇಟಿ ನೀಡಿ ಪರೀಶಿಲಿಸಿದ್ದಾರೆ. ಅರೇನೂರು ಗ್ರಾಮ ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಬಾರಿ ಮಳೆಯಿಂದ ಸಾಕಷ್ಟು ನಷ್ಟ ಸಂಭವಿಸಿದೆ. ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

ಸತತ ಮಳೆಗೆ ಜಿಲ್ಲೆಯ ಹೊರವಲಯದ ನಲ್ಲೂರು ನಲ್ಲೂರು ಕೆರೆ  ಕೋಡಿ ಬಿದ್ದಿದೆ. ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲೇ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದಿದ್ದರಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ರೈತರ ಹೊಲ ಗದ್ದೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

Published On - 4:04 pm, Mon, 11 July 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ