AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಕಾಫಿನಾಡು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ.ಒಂದು ಕಡೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪ್ರವಾಸಿಗರು ಪರದಾಡಿದರೆ ಮತ್ತೊಂದಡೆ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ ಪ್ರವಾಸಿಗರಿಗೆ ಶಾಕ್ ನೀಡಿದೆ.

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
ಪ್ಲಾಸ್ಟಿಕ್​ ನಿಷೇಧ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on:Jun 24, 2024 | 8:00 AM

Share

ಚಿಕ್ಕಮಗಳೂರು, ಜೂನ್​ 23: ಕಾಫಿನಾಡು ಚಿಕ್ಕಮಗಳೂರಿಗೆ (Chikkamagaluru) ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು (Tourists) ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ (Chandradrona Parvata) ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ (Mullayangiri) ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್​ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್​​​ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್​​​ ವಸ್ತುಗಳು ಸಿಕ್ಕರೆ ಸೀಜ್​​ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಳೆಗಾಲ ಆರಂಭವಾಗಿದ್ದರಿಂದ ವೀಕೆಂಡ್​​ನಲ್ಲಿ ಹೆಚ್ಚಿನ ಜನರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿನ ಮುಳ್ಳಯ್ಯನಗಿರಿ, ಎತ್ತಿನ ಭುಜ ಶಿಖರದಲ್ಲಿ ಚಾರಣಕ್ಕೆ ತೆರಳುತ್ತಾರೆ. ಹೀಗೆ ತೆರಳುವವರು ಕೆಲವೊಂದು ಸಾರಿ ಅಡ್ಡಾದಿಡ್ಡಿ ವಾಹನ ಪಾರ್ಕ್​ ಮಾಡುತ್ತಾರೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುವವದರಿಂದ ಘಟ್ಟಗಳ ರಸ್ತೆ ಚಿಕ್ಕದಾಗಿರುವುದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ​ಜಾಮ್​ ಉಂಟಾಗುತ್ತದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!

ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಪರದಾಡುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತಕ್ಕೆ ‌ತೆರಳುವ ರಸ್ತೆಯಲ್ಲಿದ್ದ ಕೈಮರ ಚೆಕ್​ಪೋಸ್ಟ್​​ನ್ನು N,M,D,C ಗ್ರಾಮಕ್ಕೆ ಬದಲಾವಣೆ ಮಾಡಿದ್ದು, ಅಲ್ಲಿನ ಸ್ಥಳೀಯರು ಪ್ರವಾಸಿಗರ ಕಿರುಚಾಟ ಕೂಗಾಟದ ಜೊತೆ ಮೋಜು ಮಸ್ತಿಯಿಂದ ತೊಂದರೆ ಆಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಸಾವಿರಾರು ಪ್ರವಾಸಿಗರಿಂದ ಸದಾ ಗಿಜುಗುಡುವ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಮೂಡಿಗೆರೆ ತಾಲೂಕಿನ ಬೈರಾಪುರ ಬಳಿಯ ಎತ್ತಿನಭುಜಕ್ಕೆ ಇದೀಗ ಪ್ರವಾಸಿಗರು ಹಾಗೂ ಚಾರಣಿಗರು ಬರದಂತೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಿಹಂಗಮವಾಗಿ ನಿಂತಿರುವ ಶಿಖರವೇ ಎತ್ತಿನ ಭುಜ. ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅನ್ನದೆ ವರ್ಷವಿಡೀ ಪ್ರವಾಸಿಗರಿಂದ ತುಂಬಿ ತುಳುಕುವ ಶಿಖರವಿದು. ಕಳೆದ ಒಂದು ತಿಂಗಳಿಂದ ಎತ್ತಿನಭುಜ ಶಿಖರದ ಸೌಂದರ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸಿ ಹೋಗಿದ್ದಾರೆ.

ಕೇವಲ‌ ಸೌಂದರ್ಯ ಸವಿಯುವದರ ಜೊತೆಗೆ ಇಲ್ಲಿ ಹುಚ್ಚಾಟವಾಡಿ, ಪ್ರಕೃತಿಯ ಒಡಲನ್ನೇ ಹಾಳು ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜಕ್ಕೆ ಪ್ರವಾಸಿಗರು ಆಗಮಿಸುವುದನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಇದೀಗ ಎತ್ತಿನಭುಜ, ಮುಳ್ಳಯ್ಯನಗಿರಿ ತಾಣಕ್ಕೆ ಚಾರಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಪ್ರವಾಸಿಗರು ಹಾಗೂ ಚಾರಣಿಗರಿಗೆ ಶಾಕ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Mon, 24 June 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?