AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ: ಕಾರಿನಿಂದ ಇಳಿದು ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ; ವಿಡಿಯೋ ನೋಡಿ

Ramnath Kovind: ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಹಾರೈಸಿದ್ದಾರೆ. ದೇಗುಲದಿಂದ ಹೆಲಿಪ್ಯಾಡ್​ಗೆ ತೆರಳುವಾಗ ಶುಭಾಶಯ ಕೋರಿದ್ದಾರೆ. ಕಾರಿನಿಂದ ಇಳಿದು ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕೆಲವು ಕ್ಷಣ ರಸ್ತೆಯಲ್ಲೇ ನಿಂತು ಮಕ್ಕಳ ಕಡೆಗೆ ರಾಷ್ಟ್ರಪತಿಗಳು ಕೈಬೀಸಿದ್ದಾರೆ.

ಶೃಂಗೇರಿ: ಕಾರಿನಿಂದ ಇಳಿದು ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ
TV9 Web
| Edited By: |

Updated on: Oct 08, 2021 | 6:15 PM

Share

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಯಿಂದ ತೆರಳುವಾಗ ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ್ದಾರೆ. ದೇಗುಲದಿಂದ ತೆರಳುವಾಗ ಈ ವಿಶೇಷ ಮತ್ತು ಭಾವನಾತ್ಮಕ ದೃಶ್ಯ ಕಂಡುಬಂದಿದೆ. ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಹಾರೈಸಿದ್ದಾರೆ. ದೇಗುಲದಿಂದ ಹೆಲಿಪ್ಯಾಡ್​ಗೆ ತೆರಳುವಾಗ ಶುಭಾಶಯ ಕೋರಿದ್ದಾರೆ. ಕಾರಿನಿಂದ ಇಳಿದು ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕೆಲವು ಕ್ಷಣ ರಸ್ತೆಯಲ್ಲೇ ನಿಂತು ಮಕ್ಕಳ ಕಡೆಗೆ ರಾಷ್ಟ್ರಪತಿಗಳು ಕೈಬೀಸಿದ್ದಾರೆ.

ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದರು. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಗಿತ್ತು. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್​ ಅವರಿಗೆ ಸ್ವಾಗತ ಕೋರಲಾತ್ತು. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಆ ಬಳಿಕ ನವರಾತ್ರಿ ಉತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾಗಿದ್ದರು. ಸಂಜೆ ನಾಲ್ಕು ಗಂಟೆವರೆಗೂ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿಯಾಗಿದ್ದರು.

ಮಂಗಳೂರು ಏರ್​​ಪೋರ್ಟ್​ನಿಂದ ಹೆಲಿಕಾಪ್ಟರ್​​ನಲ್ಲಿ ಶೃಂಗೇರಿಯತ್ತ ಪ್ರಯಾಣ ಬೆಳೆಸಿದ್ದರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರಿನಿಂದ ಶೃಂಗೇರಿಗೆ ತೆರಳಿದ್ದರು. ಮಂಗಳೂರಿನ ಸರ್ಕ್ಯೂಟ್ ಹೌಸ್​ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಕೋವಿಂದ್ ತೆರಳಿದ್ದರು. ಏರ್ಪೋರ್ಟ್​ನಿಂದ ಹೆಲಿಕಾಪ್ಟರ್​ನಲ್ಲಿ ಶೃಂಗೇರಿಯತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಯಾಣಿಸಿದ್ದರು. ನಿನ್ನೆ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ 450 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಇದನ್ನೂ ಓದಿ: ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ; ಚಾಮರಾಜನಗರದಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ