AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ

ಚಿಕ್ಕಮಗಳೂರಿನ ಎನ್‌ಎಂಸಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರೇ ಬಸ್ ತಳ್ಳಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸರ್ಕಾರದ ಉಚಿತ ಯೋಜನೆಗಳ ನಡುವೆ ಬಸ್‌ಗಳ ನಿರ್ವಹಣೆ ಮರೆತಿರುವ ಸಾರಿಗೆ ಇಲಾಖೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ
ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಪೋಸ್ಟ್ ವೈರಲ್Image Credit source: tv9
ಗಣಪತಿ ಶರ್ಮಾ
|

Updated on: Apr 20, 2026 | 1:46 PM

Share

ಚಿಕ್ಕಮಗಳೂರು, ಏಪ್ರಿಲ್ 20: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಲವಾಗಿ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ನಗರದ ಮಧ್ಯರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ (KSRTC Bus) ಬಸ್‌ವೊಂದು ಕೆಟ್ಟು ನಿಂತಿದ್ದು, ಪ್ರಯಾಣಿಕರೇ ಬಸ್ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರವಾಗಿ ‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಲಾಗಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಸದ್ಯ ಈ ಪೋಸ್ಟ್ ಹಾಗೂ ವಿಡಿಯೋ ವೈರಲ್ ಆಗುತ್ತಿದೆ.

ರಸ್ತೆಯಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್

ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ನಗರದ ಎನ್‌ಎಂಸಿ (NMC) ಸಿಗ್ನಲ್ ಬಳಿ ತಲುಪುತ್ತಿದ್ದಂತೆ ತಾಂತ್ರಿಕ ದೋಷದಿಂದ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದೆ. ಟ್ರಾಫಿಕ್ ದಟ್ಟಣೆ ಇರುವ ಪ್ರದೇಶದಲ್ಲೇ ಬಸ್ ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಈ ವೇಳೆ ಪ್ರಯಾಣಿಕರು ಅನಿವಾರ್ಯವಾಗಿ ಬಸ್‌ನಿಂದ ಕೆಳಗಿಳಿದು ರಸ್ತೆಯಲ್ಲೇ ಬಸ್ ತಳ್ಳುವ ಮೂಲಕ ಡಿಪೋಗೆ ಕಳುಹಿಸಿಕೊಟ್ಟಿದ್ದಾರೆ.

ಸಾರ್ವಜನಿಕರ ಆಕ್ರೋಶ

ಒಂದೆಡೆ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಆದರೆ, ಬಸ್‌ಗಳ ಸುಸ್ಥಿತಿಯ ಬಗ್ಗೆ ಮಾತ್ರ ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ. ‘ಫ್ರೀ ಕೊಡುವುದು ಮುಖ್ಯವಲ್ಲ, ನಾವು ಪ್ರಯಾಣಿಸುವ ಬಸ್ ಸುರಕ್ಷಿತವಾಗಿರಬೇಕು. ರಸ್ತೆಯಲ್ಲಿ ಬಸ್ ಕೆಟ್ಟು ನಿಂತರೆ ಪ್ರಯಾಣಿಕರ ಸಮಯ ಮತ್ತು ಘನತೆಗೆ ಬೆಲೆ ಇಲ್ಲವೇ?’ ಎಂದು ಸ್ಥಳೀಯರು ಮತ್ತು ಪ್ರಯಾಣಿಕರು ಪ್ರಶ್ನಿಸಿದ್ದಾರೆ. ಉಚಿತ ಯೋಜನೆಗಳ ಪ್ರಚಾರಕ್ಕೆ ನೀಡುವ ಆದ್ಯತೆಯನ್ನು ಬಸ್‌ಗಳ ನಿರ್ವಹಣೆಗೆ ನೀಡುತ್ತಿಲ್ಲ ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಬಗ್ಗೆಯೂ ‘ಕರ್ನಾಟಕ ಪೋರ್ಟ್​​ಫೋಲಿಯೋ’ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ

ಬಸ್‌ಗಳ ಕಳಪೆ ನಿರ್ವಹಣೆಯಿಂದಾಗಿ ಪ್ರಯಾಣಿಕರು ಹೈರಾಣಾಗುತ್ತಿದ್ದು, ಸರ್ಕಾರ ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಉಚಿತ ಯೋಜನೆಗಳನ್ನು ನೀಡದೆ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?