Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಿಗೆರೆ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ: ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ- ಎಂ.ಪಿ. ಕುಮಾರಸ್ವಾಮಿ

ನನಗೆ 2004 ರಿಂದಲೂ ಇರುವ ವಿರೋಧಿಗಳು ಇಂದಿಗೂ ಇದ್ದಾರೆ. ಆದರೂ ಕೂಡಾ ನಾನು ಗೆಲ್ಲುತ್ತಲೇ ಬಂದಿದ್ದೇನೆ. ಬಿಎಸ್​ ಯಡಿಯೂರಪ್ಪ ಅವರು ಬಂದಾಗ ಬೇರೆ ಸಂದೇಶ ಕೊಡಬೇಕು ಅಂತ 3-4 ಪದಾಧಿಕಾರಿಗಳು ಸೇರಿಕೊಂಡು ಗಲಾಟೆ ಮಾಡಿದರು ಎಂದು ಎಂಪಿ ಕುಮಾರಸ್ವಾಮಿ ಹೇಳಿದರು.

ಮೂಡಿಗೆರೆ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ: ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ- ಎಂ.ಪಿ. ಕುಮಾರಸ್ವಾಮಿ
ಶಾಸಕ ಎಂಪಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Mar 17, 2023 | 1:18 PM

ಚಿಕ್ಕಮಗಳೂರು: ನಿನ್ನೆ (ಮಾ.16) ಮೂಡಿಗೆರೆ ಬಿಜೆಪಿ (BJP) ಶಾಸಕ ಎಂ.ಪಿ. ಕುಮಾರಸ್ವಾಮಿಯವರನ್ನು (MP Kumaraswamy) ವಿರೋಧಿಸಿ ಸ್ವಪಕ್ಷದ ಕಾರ್ಯಕರ್ತರೇ ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಅವರ (BS Yediyurappa) ಕಾರಿಗೆ ಮುತ್ತಿಗೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ನನಗೆ 2004 ರಿಂದಲೂ ಇರುವ ವಿರೋಧಿಗಳು ಇಂದಿಗೂ ಇದ್ದಾರೆ. ಆದರೂ ಕೂಡಾ ನಾನು ಗೆಲ್ಲುತ್ತಲೇ ಬಂದಿದ್ದೇನೆ. ಬಿಎಸ್​ ಯಡಿಯೂರಪ್ಪ ಅವರು ಬಂದಾಗ ಬೇರೆ ಸಂದೇಶ ಕೊಡಬೇಕು ಅಂತ 3-4 ಪದಾಧಿಕಾರಿಗಳು ಸೇರಿಕೊಂಡು ಗಲಾಟೆ ಮಾಡಿದರು. ಬಿಎಸ್​ ಯಡಿಯೂರಪ್ಪ ಅವರು ಕೂಡ ನಿನ್ನೆ ಬಹಳ ಬೇಸರ ಮಾಡಿಕೊಂಡಿದ್ದಾರೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ. ನನಗೆ ಟಿಕೆಟ್ ಕೊಟ್ಟರೆ ನನ್ನ ಗೆಲುವಿಗೆ ಯಾರೂ ಅಡ್ಡಿಪಡಿಸಲು ಆಗಲ್ಲ. ನಾನು ಗೆದ್ದು ಬರುತ್ತೇನೆ. ನಾನು ಇಲ್ಲಿಯವರೆಗೂ ಯಾರ ವಿರುದ್ಧವೂ ಚಾಡಿ ಹೇಳಿಲ್ಲ. ಬಹುಶಃ ಇನ್ನು ಬಿಎಸ್​ ಯಡಿಯೂರಪ್ಪನವರು ಮೂಡಿಗೆರೆಗೆ ಬರಲ್ವೇನೋ? ಸಿ.ಟಿ. ರವಿಯವರ ಮಾತೂ ಕೂಡ ನಿನ್ನೆ ಯಾರೂ ಕೇಳಲಿಲ್ಲ. ಟಿಕೆಟ್ ಕೊಟ್ಟರೆ ಗೆಲ್ಲುತ್ತೇನೆ ಅಂತ ಟಿಕೆಟ್ ಕೊಡದಂತೆ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾರ್ಯಕರ್ತರ ಪ್ರತಿಭಟನೆಗೆ ಯಡಿಯೂರಪ್ಪ ಗರಂ; ವಿಜಯಸಂಕಲ್ಪ ಯಾತ್ರೆ ರದ್ದುಗೊಳಿಸಿ ವಾಪಸ್

ಕೆಟ್ಟ ಇಮೇಜ್ ಬರಬೇಕು ಅಂತಾ ನಿನ್ನೆ ಗಲಾಟೆ ಮಾಡಿದ್ದಾರೆ. ಕಿಡಿಗೇಡಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಸೇರಿಕೊಂಡು ಈ ರೀತಿ ಮಾಡಿದ್ದಾರೆ. ಕೆಲಸ ಮಾಡಿಕೊಂಡು ಹೋಗು, ನಾವು, ಹೈಕಮಾಂಡ್ ‌ಎಲ್ಲ ಇದ್ದೇವೆ ಅಂತ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ನಾನು ಇಷ್ಟು ಕಾಲ ಮೌನವಾಗಿದ್ದಿದ್ದಕ್ಕೆ ನನಗೆ ಹಿನ್ನಡೆ ಆಗಿತ್ತು, ನಿನ್ನೆಯ ಘಟನೆ ಪಕ್ಷದ ಗಮನಕ್ಕೆ ತರುತ್ತೇನೆ. ನಮ್ಮ ಕ್ಷೇತ್ರದ ಪ್ರಮುಖರದ್ದೇ ಘಟನೆಯಲ್ಲಿ ಕೈವಾಡ ಇದೆ. ನಾನು ಅವರ ಹೆಸರು ಹೇಳಲು ಇಷ್ಟಪಡಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Fri, 17 March 23

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು