AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2023 | 6:23 PM

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!