AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 23, 2023 | 6:23 PM

Share

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!