AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 23, 2023 | 6:23 PM

Share

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ