Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2023 | 6:23 PM

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
Hasanamba Darshan Live: 4ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
Hasanamba Darshan Live: 4ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​