AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 23, 2023 | 6:23 PM

Share

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ