AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಫೆ ಸ್ಫೋಟ ಪ್ರಕರಣ: ಆರೋಪಿ ಮುಜಾಮಿಲ್​ ಜೊತೆ ಪೊಲೀಸಪ್ಪನ ಲಿಂಕ್? ಬಾಡಿಗೆ ಮನೆ ಕೊಡಿಸಿದ್ದ ಮಂಗಳೂರಿನ ಇನ್​ಸ್ಪೆಕ್ಟರ್

ಬೆಂಗಳೂರು ನಗರದ ವೈಟ್​ಫೀಲ್ಡ್ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್​ ಒಬ್ಬ ಪೊಲೀಸ್ ಇನ್​ಸ್ಪೆಕ್ಟರ್​ ಜೊತೆ ಸಂಪರ್ಕದಲ್ಲಿದ್ದ ವಿಚಾರ ಎನ್​ಐಎಗೆ ತಿಳಿದುಬಂದಿದ್ದು, ತನಿಖೆ ಚುರುಕುಗೊಂಡಿದೆ.

ಕೆಫೆ ಸ್ಫೋಟ ಪ್ರಕರಣ: ಆರೋಪಿ ಮುಜಾಮಿಲ್​ ಜೊತೆ ಪೊಲೀಸಪ್ಪನ ಲಿಂಕ್? ಬಾಡಿಗೆ ಮನೆ ಕೊಡಿಸಿದ್ದ ಮಂಗಳೂರಿನ ಇನ್​ಸ್ಪೆಕ್ಟರ್
ಆರೋಪಿ ಮುಜಾಮಿಲ್​ಗೆ ಚಿಕ್ಕಮಗಳೂರಿನಲ್ಲಿ ಬಾಡಿಗೆ ಮನೆ ಕೊಡಿಸಿದ್ದ ದ.ಕ. ಜಿಲ್ಲೆಯ ಪೊಲೀಸ್ ಇನ್​ಸ್ಪೆಕ್ಟರ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 31, 2024 | 4:42 PM

Share

ಚಿಕ್ಕಮಗಳೂರು, ಮಾ.31: ಬೆಂಗಳೂರು ನಗರದ ವೈಟ್​ಫೀಲ್ಡ್ ಬಳಿಯ ರಾಮೇಶ್ವರಂ ಕೆಫೆ (Rameshwram Cafe) ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ (NIA) ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿದೆ. ಇದೀಗ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುಜಾಮಿಲ್ ಸಂಪರ್ಕದಲ್ಲಿದ್ದ ಎನ್ನುವ ಸ್ಫೋಟಕ ವಿಚಾರ ಬಹಿರಂಗವಾಗಿದೆ. ಅಲ್ಲದೆ, ಎನ್​ಐಎ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ತುಂಗಾ ತೀರದ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್ , ರಾಮೇಶ್ವರಂ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್​ಐಎ ತನಿಖಾಧಿಕಾರಿಗಳು ಮಾಹಿತಿ ಕಲೆ‌ಹಾಕುತ್ತಿದ್ದಾರೆ. ತಲೆಮರೆಸಿಕೊಂಡಿರುವ ಅಬ್ದುಲ್ ಮತೀನ್ ತಾಹ ಈ ಮೂರು ಸ್ಫೋಟ ಪ್ರಕರಣಗಳ ಹ್ಯಾಂಡ್ಲರ್ ಆಗಿದ್ದಾನೆ.

ಸದ್ಯ ಎನ್​ಐಎ ಅಧಿಕಾರಿಗಳು ಹ್ಯಾಂಡ್ಲರ್ ತಾಹ ಮತ್ತು ಬಾಂಬರ್ ಜೊತೆ ಸಂಪರ್ಕದಲ್ಲಿದ್ದ ಬಂಧಿತ ಆರೋಪಿ ಮುಜಾಮಿಲ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಪೊಲೀಸ್ ಇನ್​ಸ್ಪೆಕ್ಟರ್ ಬಾಡಿಗೆ ಮನೆ ಕೊಡಿಸಿದ್ದರ ಬಗ್ಗೆ ಬಾಯಿಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!

ಬಾಡಿಗೆ ಮನೆ ಕೊಡಿಸುವಂತೆ ಮುಜಾಮಿಲ್, ಪೊಲೀಸ್ ಇನ್​ಸ್ಪೆಕ್ಟರ್ ಸಹಾಯ ಕೇಳಿದ್ದಾನೆ. ಚಿಕ್ಕಮಗಳೂರು ನಗರದ ಅಯ್ಯಪ್ಪ ನಗರದಲ್ಲಿರುವ ಮಾಲೀಕರೊಬ್ಬರನ್ನು ಸಂಪರ್ಕಿಸಿ ಮುಜಾಮಿಲ್​ಗೆ ಬಾಡಿಗೆ ಮನೆ ನೀಡುವಂತೆ ಇನ್​ಸ್ಪೆಕ್ಟರ್ ಸೂಚಿಸುತ್ತಾರೆ. ಅದರಂತೆ, ಮುಜಾಮಿಲ್​ಗೆ ಮಾಲೀಕರು ಬಾಡಿಗೆ ಮನೆ ನೀಡಿದ್ದರು.

ಒಂದು ವರ್ಷದ ಹಿಂದೆ ಬಾಡಿಗೆ ಮನೆಯನ್ನು ತನ್ನ ಹೆಸರಿನಲ್ಲೇ ಪಡೆದಿದ್ದ ಮುಜಾಮಿಲ್, ತನ್ನ ತಾಯಿಯೊಂದಿಗೆ ನೆಲೆಸಿದ್ದನು. 6 ತಿಂಗಳಿನಿಂದ ಅಯ್ಯಪ್ಪ ನಗರದ ಬಾಡಿಗೆ ಮನೆಯಲ್ಲೇ ಇದ್ದ ಮುಜಾಮಿಲ್, ರಾಮೇಶ್ವರಂ ಕೆಫೆ ಸ್ಫೋಟ ನಡೆಯುವ 20 ದಿನದ ಹಿಂದೆ ಬೆಂಗಳೂರಿಗೆ‌ ತೆರಳಿದ್ದನು. ಬಳಿಕ ಮುಜಾಮಿಲ್ ಬಂಧನ ಬೆನ್ನಲೇ ಆತನ ತಾಯಿ ಬಾಡಿಗೆ ಮನೆಗೆ ಬೀಗ ಹಾಕಿ ಹೋಗಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು, ಅಯ್ಯಪ್ಪ ನಗರದ ಬಾಡಿಗೆ ಮನೆಯ ಮೇಲು ದಾಳಿ ಮಾಡಿದ್ದರು. ಆದರೆ, ಕಳೆದ ಮೂರು ದಿನಗಳಿಂದ ಬಾಡಿಗೆ ಮನೆಗೆ ಬೀಗ ಹಾಕಲಾಗಿದೆ. ಸದ್ಯ, ಮುಜಾಮಿಲ್​ಗೆ ಬಾಡಿಗೆ ಮನೆ ಕೊಡಿಸಿದ್ದ ಇನ್​ಸ್ಪೆಕ್ಟರ್​ ಕುರಿತು ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಮುಜಾಮಿಲ್ ಜೊತೆ ಸಂಪರ್ಕದಲ್ಲಿದ್ದವರನ್ನು ವಿಚಾರಣೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?