AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ; ಕಳ್ಳ ದಾರಿಯಲ್ಲಿ ಮುಳ್ಳಯ್ಯನಗಿರಿಗೆ ಹೊರಟಿದ್ದ ಪ್ರವಾಸಿಗರಿಗೆ ಶಾಕ್ ನೀಡಿದ ಜಿಲ್ಲಾಡಳಿತ

ಕಾಫಿನಾಡಿನ ಜಿಲ್ಲಾಡಳಿತಕ್ಕೆ ಪ್ರವಾಸಿಗರದ್ದೆ ದೊಡ್ಡ ತಲೆ ಬಿಸಿಯಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಧಾರಾಕಾರ ಮಳೆ ಸುರಿತಾಯಿದ್ದು, ರಸ್ತೆ ಕುಸಿತವಾಗಿದೆ. ಈ ಹಿನ್ನಲೆ ಪ್ರವಾಸ ಮುಂದೂಡಿ ಎಂದು ಮನವಿ ಮಾಡಿದ್ರು, ಜಿಲ್ಲಾಡಳಿತದ ಮಾತಿಗೆ ಪ್ರವಾಸಿಗರು ಡೋಂಟ್ ಕೇರ್ ಅಂದಿದ್ದಾರೆ. ಅದರಂತೆ ಮಾತು ಕೇಳದೆ ವೀಕೆಂಡ್ ಮಸ್ತಿಗೆ ಬಂದಿದ್ದ ಪ್ರವಾಸಿಗರಿಗೆ ನಿರ್ಬಂಧದ ಶಾಕ್ ಎದುರಾಗಿದೆ.

ಚಿಕ್ಕಮಗಳೂರಿನ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ; ಕಳ್ಳ ದಾರಿಯಲ್ಲಿ ಮುಳ್ಳಯ್ಯನಗಿರಿಗೆ ಹೊರಟಿದ್ದ ಪ್ರವಾಸಿಗರಿಗೆ ಶಾಕ್ ನೀಡಿದ ಜಿಲ್ಲಾಡಳಿತ
ಚಿಕ್ಕಮಗಳೂರು ಪ್ರವಾಸಿ ತಾಣಗಳು ಬಂದ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2023 | 6:57 AM

Share

ಚಿಕ್ಕಮಗಳೂರು, ಜು.30: ಕಾಫಿನಾಡು ಚಿಕ್ಕಮಗಳೂರಿನ(Chikkamagalur) ಪ್ರಸಿದ್ಧ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತ (Chandradrona Parvata)ದ ಸಾಲಿನಲ್ಲಿ ಧಾರಾಕಾರವಾಗಿ ಮಳೆ‌ ಸುರಿಯುತ್ತಿದೆ. ಮಳೆ‌ ಸುರಿಯುತ್ತಿರುವ ರಭಸಕ್ಕೆ ಗುಡ್ಡದ ಮಣ್ಣು ಕಲ್ಲುಗಳು ರಸ್ತೆಗ ಅಡ್ಡಲಾಗಿ ಬೀಳುತ್ತಿದ್ದು. ಮಳೆ‌ ಕಡಿಮೆಯಾಗುವವರೆಗೂ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಕ್ಕೆ ಬರದಂತೆ ಚಿಕ್ಕಮಗಳೂರು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಪ್ರವಾಸಿಗರ ಬಳಿ ಮನವಿ ಮಾಡಿತ್ತು. ಜೊತೆಗೆ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ಮಾರ್ಗ ಮದ್ಯದ ಕೈಮರ ಚೆಕ್​ ಫೋಸ್ಟ್​ ಬಳಿ ಅಡ್ಡಲಾಗಿ ಗೇಟ್ ಹಾಕಿ ಪ್ರವಾಸಿಗರನ್ನ ನಿರ್ಬಂಧಿಸಿತ್ತು. ಆದರೂ ಮಾತು ಕೇಳದ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ವೀಕೆಂಡ್ ಮೋಜು ಮಸ್ತಿಗೆ ಕಳ್ಳದಾರಿಯಿಂದ ಬಂದಿದ್ದರು.

ಕಳ್ಳ ದಾರಿಯಿಂದ ಬಂದಿದ್ದ ಪ್ರವಾಸಿಗರು

ಕೈಮರ ಚೆಕ್​ ಫೋಸ್ಟ್ ಬಳಿ ಗೇಟ್ ಹಾಕಿ ಪ್ರವಾಸಿಗರನ್ನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದತ್ತಪೀಠ, ಮುಳ್ಳಯ್ಯನಗಿರಿಗೆ ನಿರ್ಬಂಧಿಸಿದ್ರೆ, ಇತ್ತ ಪ್ರವಾಸಿಗರು ಅಡ್ಡದಾರಿ ಹಿಡಿದು ಮುಂಜಾನೆ ನಾಲ್ಕು ಗಂಟೆಗೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಕ್ಕೆ ನೂರಾರು ವಾಹನಗಳಲ್ಲಿ ತೆರಳಿದ್ದರು. ಮಾಹಿತಿ ತಿಳಿದ ಪೊಲೀಸರು. ಮುಳ್ಳಯ್ಯನಗಿರಿ ಪ್ರಮುಖ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಪ್ರವಾಸಿಗರನ್ನ ವಾಪಸ್ ಕಳಿಸಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಂದ್ರದ್ರೋಣ ಪರ್ವತದಲ್ಲಿ ಸುರಿಯುತ್ತಿರುವ ಮಳೆಗೆ, ಅನಾಹುತಗಳ ಸರಮಾಲೆಗಳ ಸೃಷ್ಟಿಯಾಗಿದೆ. ಇದರಿಂದ ಮುಳ್ಳಯ್ಯನಗಿರಿ ತೆರಳುವ ಮಾರ್ಗದ ಮೊದಲ ತಿರುವಿನಲ್ಲಿ ಗುಡ್ಡ ಕುಸಿತವಾಗಿದೆ. ಜಿಲ್ಲಾಡಳಿತ ಪ್ರವಾಸಿಗರ ಹಿತದೃಷ್ಟಿಯಿಂದ ಪ್ರವಾಸಕ್ಕೆ ಬರದಂತೆ ಮನವಿ ಮಾಡಿದ್ರು, ಪ್ರವಾಸಿಗರು ಕೇಳುತ್ತಿಲ್ಲ. ಒಟ್ಟಿನಲ್ಲಿ ಪ್ರವಾಸಿಗರಿಗೆ ಜಿಲ್ಲಾಡಳಿತದ ಕಾಳಜಿಗಿಂತ ವೀಕೆಂಡ್ ಮೋಜು ಮಸ್ತಿ ಮುಖ್ಯವಾದಂತೆ ಕಾಣಿಸುತ್ತಿದ್ದು. ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ ಮಾಡಿದ್ರು ಕೇಳುತ್ತಿಲ್ಲ. ಸುರಿಯುತ್ತಿರುವ ಮಳೆ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿ ಮಾಡಿದ್ರೆ.‌ ಇತ್ತ ಪ್ರವಾಸಿಗರ ಅವಾಂತರಗಳು ಚಿಕ್ಕಮಗಳೂರು ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ತಲೆಬಿಸಿ ತರಿಸಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು