AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲು ಅರಣ್ಯದಲ್ಲಿ ನಿಗೂಢ ಕ್ಯಾಮರಾ ಪತ್ತೆ!

ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಖಾಸಗಿ ವ್ಯಕ್ತಿಗಳು ಎನ್‍ಜಿಒ ಹೆಸರಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಟ್ರ್ಯಾಪಿಂಗ್ ಕ್ಯಾಮರಾ ಅಳವಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ವ್ಯಾಪ್ತಿಯ ಚುರ್ಚೆಗುಡ್ಡದಲ್ಲಿ ನಡೆದಿದೆ. ಈ ಪ್ರಕರಣ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಕಳೆದ 1 ವಾರದಿಂದಲೂ ಚುರ್ಚೆಗುಡ್ಡದ ಶ್ರೀಗಂಧ ರಸ್ತೆ ಮಾರ್ಗದ ಒಂದು ಕಿ.ಮೀ ದೂರದಲ್ಲಿ ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಬರುವಂತಹ ನೀರಿನಗುಂಡಿಯ ಬಳಿ ಮರಕ್ಕೆ ಕ್ಯಾಮರಾ ಅಳವಡಿಸಲಾಗಿದೆ. ಕಬ್ಬಿಣದ ಸರಪಳಿಯಲ್ಲಿ ಕ್ಯಾಮರವನ್ನು ಯಾರು ತೆಗೆದುಕೊಂಡು ಹೋಗದಂತೆ ಕಟ್ಟಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು […]

ಮೀಸಲು ಅರಣ್ಯದಲ್ಲಿ ನಿಗೂಢ ಕ್ಯಾಮರಾ ಪತ್ತೆ!
ಸಾಧು ಶ್ರೀನಾಥ್​
| Updated By: |

Updated on:Jun 27, 2020 | 6:29 PM

Share

ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಖಾಸಗಿ ವ್ಯಕ್ತಿಗಳು ಎನ್‍ಜಿಒ ಹೆಸರಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಟ್ರ್ಯಾಪಿಂಗ್ ಕ್ಯಾಮರಾ ಅಳವಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ವ್ಯಾಪ್ತಿಯ ಚುರ್ಚೆಗುಡ್ಡದಲ್ಲಿ ನಡೆದಿದೆ. ಈ ಪ್ರಕರಣ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಕಳೆದ 1 ವಾರದಿಂದಲೂ ಚುರ್ಚೆಗುಡ್ಡದ ಶ್ರೀಗಂಧ ರಸ್ತೆ ಮಾರ್ಗದ ಒಂದು ಕಿ.ಮೀ ದೂರದಲ್ಲಿ ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಬರುವಂತಹ ನೀರಿನಗುಂಡಿಯ ಬಳಿ ಮರಕ್ಕೆ ಕ್ಯಾಮರಾ ಅಳವಡಿಸಲಾಗಿದೆ.

ಕಬ್ಬಿಣದ ಸರಪಳಿಯಲ್ಲಿ ಕ್ಯಾಮರವನ್ನು ಯಾರು ತೆಗೆದುಕೊಂಡು ಹೋಗದಂತೆ ಕಟ್ಟಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಈ ರೀತಿಯ ಕ್ಯಾಮರಾವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಇಟ್ಟಿರಬೇಕು ಎಂದು ಸುಮ್ಮನಾಗಿದ್ರು. ಆದ್ರೆ ಪದೇ ಪದೇ ಸ್ಥಳೀಯ ಎನ್‍ಜಿಒ ಒಂದರಲ್ಲಿ ಕೆಲಸ ಮಾಡುವವರು ಈ ಟ್ರ್ಯಾಪಿಂಗ್ ಕ್ಯಾಮರಾ ಬಳಿ ಬರುತ್ತಿರೋದನ್ನು ಗಮನಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ವಿಚಾರಿಸಿದಾಗ ಇಲಾಖೆ ಯಾವುದೇ ಕ್ಯಾಮರಾ ಅಳವಡಿಸದೇ ಇರುವುದು ತಿಳಿದಿದೆ.

ಟ್ರ್ಯಾಪಿಂಗ್ ಕ್ಯಾಮರಾ ಆ ಸ್ಥಳದಿಂದ ನಾಪತ್ತೆ ಸಾವಿರಾರು ಎಕರೆ ವ್ಯಾಪ್ತಿಯಲ್ಲಿರುವ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಚಿರತೆ, ಹುಲಿ, ನರಿ, ಆನೆ, ಕರಡಿ ಸೇರಿದಂತೆ ಅಮೂಲ್ಯವಾದ ಶ್ರೀಗಂಧ ಮರಗಳಿವೆ. ಈ ಪ್ರದೇಶವನ್ನು ಕಾಡುಗಳ್ಳರು ಹಾಗೂ ಇನ್ನಿತರ ಚಟುವಟಿಕೆಗಳಿಂದ ರಕ್ಷಿಸಲು ವಲಯ ಅರಣ್ಯಾಧಿಕಾರಿಗಳು, ಉಪವಲಯ ಅರಣ್ಯಾಧಿಕಾರಿಗಳು ಸೇರಿದಂತೆ ಅರಣ್ಯ ರಕ್ಷಕರು ಸಹ ಈ ಪ್ರದೇಶದ ಮೇಲೆ ಹದ್ದಿನ ಕಣ್ಣಿಟ್ಟಿರುತ್ತಾರೆ.

ಆದ್ರೂ ಈ ಪ್ರದೇಶದಲ್ಲಿ ಟ್ರ್ಯಾಪಿಂಗ್ ಕ್ಯಾಮರಾ ಅಳವಡಿಸಿ ಒಂದು ವಾರ ಕಳೆದ್ರೂ ಇಲಾಖೆ ಸಿಬ್ಬಂದಿಗೆ ಗೊತ್ತಾಗದೇ ಇರುವುದು ಅನುಮಾನ ಮೂಡಿಸಿದೆ. ಅಧಿಕಾರಿಗಳ ಕಣ್ಣಾಮುಚ್ಚಾಲೆ ವೇಳೆ ಕ್ಯಾಮರಾ ನಾಪತ್ತೆಯಾಗಿದ್ದು ಅಕ್ರಮವಾಗಿ ಮೀಸಲು ಅರಣ್ಯದಲ್ಲಿ ಕ್ಯಾಮರಾ ಅಳವಡಿಸಿರುವ ಬಗ್ಗೆ ಗೊತ್ತಾಗುತ್ತಿದ್ದಂತೆ ಟ್ರ್ಯಾಪಿಂಗ್ ಕ್ಯಾಮರಾ ಆ ಸ್ಥಳದಿಂದ ನಾಪತ್ತೆಯಾಗಿದೆ.

Published On - 6:28 pm, Sat, 27 June 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ