AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.30ರಿಂದ ರಾಜ್ಯಾದ್ಯಂತ ದತ್ತಮಾಲೆ ಅಭಿಯಾನ; 7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

ಶ್ರೀರಾಮಸೇನೆ ನೇತೃತ್ವದಲ್ಲಿ ಅಕ್ಟೋಬರ್​ 30ರಿಂದ ದತ್ತಮಾಲೆ ಅಭಿಯಾನ ನಡೆಯಲಿದೆ. ಏಳು ದಿನಗಳ ಈ ಅಭಿಯಾನದ ಮೂಲಕ ತಮ್ಮ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀರಾಮಸೇನೆ ಸರ್ಕಾರಕ್ಕೆ ಆಗ್ರಹಿಸಲಿದೆ.

ಅ.30ರಿಂದ ರಾಜ್ಯಾದ್ಯಂತ ದತ್ತಮಾಲೆ ಅಭಿಯಾನ; 7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ
ದತ್ತಪೀಠ (ಎಡಚಿತ್ರ) ಶ್ರೀರಾಮಸೇನೆ ಪತ್ರ (ಬಲಚಿತ್ರ)
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Oct 09, 2023 | 12:56 PM

Share

ಚಿಕ್ಕಮಗಳೂರು ಅ.09: ಕಳೆದ ವರ್ಷದಂತೆ ಈ ವರ್ಷವೂ ಶ್ರೀರಾಮಸೇನೆ (Shri ram Sena) ದತ್ತಮಾಲೆ ಅಭಿಯಾನ ನಡೆಸಲು ನಿರ್ಧರಿಸಿದೆ. ಅಕ್ಟೋಬರ್ 30 ರಿಂದ ರಾಜ್ಯಾದ್ಯಂತ ಏಳು ದಿನಗಳ ಕಾಲ ದತ್ತಮಾಲೆ ಅಭಿಯಾನ ನಡೆಯಲಿದೆ. ದತ್ತಮಾಲೆ (Dattamale) ಅಭಿಯಾನದ ಮೂಲಕ ಏಳು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಡಲು ನಿರ್ಧರಿಸಿದೆ. ನವೆಂಬರ್ 5 ರಂದು ಶ್ರೀರಾಮಸೇನೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪವರ್ತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ (DattaPeeta) ಆಗಮಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ಹೋಮ, ದತ್ತ ಪಾದುಕೆ‌ ದರ್ಶನ ನಡೆಯಲಿದೆ.

ದತ್ತಮಾಲೆ ಅಭಿಮಾಯನದ ಮೂಲಕ ಶ್ರೀರಾಮಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಏಳು ಬೇಡಿಕೆಗಳನ್ನು ಸಲ್ಲಿಸಲಿದ್ದಾರೆ. “ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. ಉರ್ದು ನಾಮಫಲಕವನ್ನ ತೆಗೆಯಬೇಕು. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು” ಎಂದು ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ನೆರೆವೇರಿದ ಪೂಜೆ

ಏನಿದು ದತ್ತಪೀಠ ವಿವಾದ

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Mon, 9 October 23

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ