AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೂರಿಗೆ ಆಗಮಿಸಿದ ಯೋಧನ ಪಾರ್ಥಿವ ಶರೀರ; ಕುಟುಂಬಸ್ಥರು ಸೇರಿದಂತೆ ಸಾವಿರಾರು ಜನರಿಂದ ಮೆರವಣಿಗೆ

ಮ್ಮುವಿನಲ್ಲಿ ಕರ್ತವ್ಯದಲ್ಲಿದ್ದಾಗ ಬಿ.ಕೆ ಶೇಷಪ್ಪ ಎಂಬ ಯೋಧ ವಾಹನ ರಿಪೇರಿ ಮಾಡುವಾಗ ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಈಗ ಜಮ್ಮುವಿನಿಂದ ಹುಟ್ಟೂರಿಗೆ ಯೋಧನ ಪಾರ್ಥಿವ ಶರೀರ ತರಲಾಗಿದೆ.

ಹುಟ್ಟೂರಿಗೆ ಆಗಮಿಸಿದ ಯೋಧನ ಪಾರ್ಥಿವ ಶರೀರ; ಕುಟುಂಬಸ್ಥರು ಸೇರಿದಂತೆ ಸಾವಿರಾರು ಜನರಿಂದ ಮೆರವಣಿಗೆ
ಹುಟ್ಟೂರಿಗೆ ಆಗಮಿಸಿದ ಯೋಧನ ಪಾರ್ಥಿವ ಶರೀರ
TV9 Web
| Updated By: ಆಯೇಷಾ ಬಾನು|

Updated on:Nov 08, 2021 | 12:49 PM

Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳವಾಲ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸಿದೆ. ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದಾಗ ಬಿ.ಕೆ ಶೇಷಪ್ಪ ಎಂಬ ಯೋಧ ವಾಹನ ರಿಪೇರಿ ಮಾಡುವಾಗ ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಈಗ ಜಮ್ಮುವಿನಿಂದ ಹುಟ್ಟೂರಿಗೆ ಯೋಧನ ಪಾರ್ಥಿವ ಶರೀರ ತರಲಾಗಿದೆ.

ಸದ್ಯ ಕಡೂರು ಪಟ್ಟಣದಲ್ಲಿ ಯೋಧನ ಮೃತದೇಹ ಮೆರವಣಿಗೆ ಮಾಡಲಾಗುತ್ತಿದೆ. ಮೆರವಣಿಗೆಯಲ್ಲಿ ಮೃತ ಯೋಧನ ಕುಟುಂಬಸ್ಥರು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದಾರೆ. ಬಿಳವಾಲ ಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.

ಕಡೂರು ಕ್ಷೇತ್ರದ ಬಿಳುವಾಲ ಗ್ರಾಮದ ಶೇಷಪ್ಪನವರು BSFನಲ್ಲಿ ಯೋಧನಾಗಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಜಮ್ಮುವಿನಲ್ಲಿ ಕರ್ತವ್ಯ ನಿರತನಾಗಿದ್ದಾಗ ಅವಘಡದಿಂದ ಗಾಯಗೊಂಡಿದ್ದರು. ಜಮ್ಮುವಿನ ಆಸ್ಪತ್ರೆಯಲ್ಲಿ ನೆನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಸೇವಾನಿರತನಾಗಿದ್ದಾಗ ಮರಣಹೊಂದಿದ ಈ ವೀರಯೋಧನ ಅಂತ್ಯಸಂಸ್ಕಾರ ಮಿಲಿಟರಿ ಸರ್ಕಾರಿ ಗೌರವಗಳೊಂದಿಗೆ ನಡೆಯಲು ಎಲ್ಲ ರೀತಿಯ ಸಿದ್ಧತೆಗಳನ್ನು ಗ್ರಾಮದಲ್ಲಿ ಮಾಡಿಕೊಳ್ಳಲಾಗಿದೆ.

ಭಾನುವಾರ ರಾತ್ರಿ ಪಾರ್ಥಿವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಅಲ್ಲಿಂದ ಯಲಹಂಕದ BSF ಕಚೇರಿಗೆ ಪಾರ್ಥಿವ ಶರೀರ ತರಲಾಯಿತು. ಅಲ್ಲಿ ಮಿಲಿಟರಿ ರೀತಿನೀತಿಗಳ ಪಾಲನೆ ನಂತರ ಎಲ್ಲ ಮಿಲ್ಟ್ರಿ ಗೌರವಗಳೊಂದಿಗೆ ಕಡೂರಿನ ಬಿಳುವಾಲ ಗ್ರಾಮಕ್ಕೆ ಕರೆತರಲಾಗಿದೆ. ಬಿಳುವಾಲ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂಬರ್ 25 ರಲ್ಲಿ ಅಂತ್ಯಕ್ರಿಯೆ ಆಗಬೇಕೆಂಬುದು ಜನರ ಒತ್ತಾಯವಾಗಿದೆ.

ಇದನ್ನೂ ಓದಿ: Chhattisgarh News ಛತ್ತೀಸ್‌ಗಡದಲ್ಲಿ ಸಿಆರ್‌ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ: 4 ಯೋಧರು ಸಾವು, ಮೂವರಿಗೆ ಗಾಯ

Published On - 12:05 pm, Mon, 8 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ