AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ನಾಳೆ ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 12, 2022 | 11:04 PM

ಚಿಕ್ಕಮಗಳೂರು: ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, (Dattamala Abhiyan)  ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ನಾಳೆ ಬೆಳಗ್ಗೆ 6 ರಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಗರದಲ್ಲಿ ಶ್ರೀರಾಮ ಸೇನೆಯಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಬಳಿಕ ದತ್ತಪೀಠಕ್ಕೆ ಭಕ್ತರು ತೆರಳಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ದತ್ತ ಅಭಿಯಾನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಎಸ್​ಪಿ, ಎಎಸ್ಪಿ ಸೇರಿ ಮೂವರು ಡಿವೈಎಸ್ಪಿ, 18 ಮಂದಿ ಸಿಪಿಐ, 67 ಮಂದಿ ಪಿಎಸ್ಐ, 147 ಮಂದಿ ಎಎಸ್​ಐ ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ವಾಹನ ಸಂಚಾರಕ್ಕೆ ನಿರ್ಬಂಧ

ನಗರದಲ್ಲಿ ಶೋಭಾಯಾತ್ರೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ನವೆಂಬರ್ 13ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸವನಹಳ್ಳಿ ಮುಖ್ಯರಸ್ತೆ ಮತ್ತು ಎಂ.ಜಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Sat, 12 November 22

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್