AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗದಿದ್ದರೆ ಜನಾಕ್ರೋಶ ಎದುರಿಸಲು ಸಿದ್ಧರಾಗಿ: ಬಿಜೆಪಿಗೆ ಶ್ರೀರಾಮಸೇನೆ ಸವಾಲು

ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗದಿದ್ದರೆ ಜನಾಕ್ರೋಶ ಎದುರಿಸಲು ಸಿದ್ಧರಾಗಿ: ಬಿಜೆಪಿಗೆ ಶ್ರೀರಾಮಸೇನೆ ಸವಾಲು
ಚಿಕ್ಕಮಗಳೂರಿನ ಬಾಬಾಬುಡನ್​ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠ
TV9 Web
| Edited By: |

Updated on:Oct 12, 2022 | 3:17 PM

Share

ಚಿಕ್ಕಮಗಳೂರು: ತಾಲ್ಲೂಕಿನ ಬಾಬಾಬುಡನ್​ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ (Bababudangiri Inam Datta Peetha) ನವೆಂಬರ್ 13ರ ಒಳಗೆ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಹಿಂದೂಗಳ ಆಕ್ರೋಶ ಎದುರಿಸಲು ಸರ್ಕಾರವು ಸಿದ್ಧವಾಗಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಸಂಚಾಲಕ ಗಂಗಾಧರ ಕುಲಕರ್ಣಿ ಎಚ್ಚರಿಸಿದರು. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ. ಈಗ್ಯಾಕೆ ಸುಮ್ಮನಿದ್ದೀರಿ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಸ್ಲಿಮರು ಏನು ಮಾಡಿದರೂ ಸುಮ್ಮನಿರುವ ಸರ್ಕಾರವು ನಮಗೆ ನಮಗೆ ಮಾತ್ರ ಎಲ್ಲದಕ್ಕೂ ಕಿರಿಕಿರಿ ಮಾಡುತ್ತದೆ. ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.

ಮಾಲೆ ಹಾಕಿ ದತ್ತಪೀಠಕ್ಕೆ ಬಾರದಿದ್ದರೆ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದೆ. ಅದೇ ರೀತಿ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಈಗ ಸುಮ್ಮನಿದ್ದಾರೆ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಎಚ್ಚರಿಸಿದರು.

ದತ್ತಪೀಠದಲ್ಲಿರು ಗಂಧದ ಬಾವಿ ಪೂರ್ತಿ ಕುಸಿಯುವ ಸ್ಥಿತಿ ತಲುಪಿದೆ. ಅಲ್ಲಿರುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಸರ್ಕಾರದ ಕೈಲಿ ಅಲ್ಲಿನ ಮಣ್ಣು ರಕ್ಷಣೆ ಮಾಡಲು ಆಗುತ್ತಿಲ್ಲ. ಮುಜರಾಯಿ ಇಲಾಖೆಯು ಗಾಂಧಿಜೀಯ ಮೂರು ಮಂಗಗಳಂತೆ ವರ್ತಿಸುತ್ತಿದೆ. ಮುಸ್ಲಿಮರು ಏನೇ ಮಾಡಿದರೂ ಸುಮ್ಮನಿರುತ್ತದೆ. ನೀವು ಸರ್ಕಾರದ ಅಧೀನಲ್ಲಿದ್ದೀರಾ, ಮುಸ್ಲಿಮರ ಅಧೀನದಲ್ಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ

ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್​ (Karnataka High Court) ಆದೇಶ ಹೊರಡಿಸಿದೆ. ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿದೆ. ‘ಈ ಸಂಬಂಧ ಸರ್ಕಾರವು ಜುಲೈ 19ರಂದು ಸಂಪುಟದ ಉಪಸಮಿತಿ ಶಿಫಾರಸಿನಂತೆ ಕ್ರಮ ಕೈಗೊಂಡಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ’ ಎಂದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು.

Published On - 3:15 pm, Wed, 12 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?