AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳಿಗೆ ಕೋರ್ಟ್​ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 11, 2024 | 2:51 PM

Share

ಚಿಕ್ಕಮಗಳೂರು, (ಮಾರ್ಚ್ 11): ಜಿಲ್ಲೆ ಶೃಂಗೇರಿ(sringeri prostitution Case) ತಾಲೂಕಿನಲ್ಲಿ ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ (prostitution) ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಇದೀಗ ಚಿಕ್ಕಮಗಳೂರು (Chikkamagalur ) ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷಿ ವಿಧಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್​​, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಆದೇಶ ಹೊರಡಿಸಿದ್ದಾರೆ.

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಬಾಲಕಿಯ ತಾಯಿ ಸೇರಿದಂತೆ ನಾಲ್ಕು ಜನರ ಮೇಲೆ ಆರೋಪ ಸಾಬೀತಾಗಿತ್ತು. ನಾಲ್ಕು ಜನರನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನ ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಈ ಮೂಲಕ ಸ್ಮಾಲ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ ಶರಣ್ ಅಪರಾಧಿಗಳೆಂದು ಸಾಬೀತಾಗಿತ್ತು.

ಇದನ್ನೂ ಓದಿ: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ: ತಾಯಿ ಸೇರಿದಂತೆ ನಾಲ್ವರು ದೋಷಿ, 49 ಜನ ಖುಲಾಸೆ

ತಾಯಿಯ ಕಿರುಕುಳ ತಾಳಲಾರದೆ ಬಾಲಕಿ ವೇಶ್ಯಾವಾಟಿಕೆ ಒಪ್ಪಿದ್ದಳು. ಹೀಗಾಗಿ 2020ರ ಸೆಪ್ಟೆಂಬರ್ 1 ರಿಂದ 2021ರ ಜನವರಿ 27ರ ವರೆಗೂ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆದಿತ್ತು.ಕೊನೆಗೆ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪದ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ 2021ರಲ್ಲಿ ಪೊಲೀಸರು ದಾಳಿ ಮಾಡಿ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿದ್ದರು. ಈ ಒಂದೇ ಅತ್ಯಾಚಾರ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 53 ಜನರನ್ನು ಬಂಧಿಸಿ ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ