AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳಿಗೆ ಕೋರ್ಟ್​ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 11, 2024 | 2:51 PM

Share

ಚಿಕ್ಕಮಗಳೂರು, (ಮಾರ್ಚ್ 11): ಜಿಲ್ಲೆ ಶೃಂಗೇರಿ(sringeri prostitution Case) ತಾಲೂಕಿನಲ್ಲಿ ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ (prostitution) ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಇದೀಗ ಚಿಕ್ಕಮಗಳೂರು (Chikkamagalur ) ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷಿ ವಿಧಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್​​, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಆದೇಶ ಹೊರಡಿಸಿದ್ದಾರೆ.

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಬಾಲಕಿಯ ತಾಯಿ ಸೇರಿದಂತೆ ನಾಲ್ಕು ಜನರ ಮೇಲೆ ಆರೋಪ ಸಾಬೀತಾಗಿತ್ತು. ನಾಲ್ಕು ಜನರನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನ ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಈ ಮೂಲಕ ಸ್ಮಾಲ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ ಶರಣ್ ಅಪರಾಧಿಗಳೆಂದು ಸಾಬೀತಾಗಿತ್ತು.

ಇದನ್ನೂ ಓದಿ: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ: ತಾಯಿ ಸೇರಿದಂತೆ ನಾಲ್ವರು ದೋಷಿ, 49 ಜನ ಖುಲಾಸೆ

ತಾಯಿಯ ಕಿರುಕುಳ ತಾಳಲಾರದೆ ಬಾಲಕಿ ವೇಶ್ಯಾವಾಟಿಕೆ ಒಪ್ಪಿದ್ದಳು. ಹೀಗಾಗಿ 2020ರ ಸೆಪ್ಟೆಂಬರ್ 1 ರಿಂದ 2021ರ ಜನವರಿ 27ರ ವರೆಗೂ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆದಿತ್ತು.ಕೊನೆಗೆ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪದ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ 2021ರಲ್ಲಿ ಪೊಲೀಸರು ದಾಳಿ ಮಾಡಿ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿದ್ದರು. ಈ ಒಂದೇ ಅತ್ಯಾಚಾರ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 53 ಜನರನ್ನು ಬಂಧಿಸಿ ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!