Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ; ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ ಆರೋಪಿಗಳು

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ; ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ ಆರೋಪಿಗಳು
ಸಾಂದರ್ಭಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jan 08, 2024 | 7:51 AM

ಚಿಕ್ಕಮಗಳೂರು, ಜ.08: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ (Baba Budangiri Dargah) 7 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದತ್ತಜಯಂತಿಯ (Datta Jayanti) ವೇಳೆ ನಡೆದಿದ್ದ ಘಟನೆಗಳು ಇದೀಗ ರಾಜಕೀಯ ಅಸ್ತ್ರಗಳಾಗಿವೆ. ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ. ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ ಹಿನ್ನಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಘಟನೆ ಹಿನ್ನೆಲೆ

ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ 7 ವರ್ಷಗಳ ಹಿಂದೆ ಅಂದ್ರೆ 2017ರ ಡಿ.03ರಂದು ದತ್ತಜಯಂತಿ ವೇಳೆ ಗಲಾಟೆ ನಡೆಸಿ ಗೋರಿ ಧ್ವಂಸ ಮಾಡಲಾಗಿತ್ತು. ನಿಷೇಧಿತ ಪ್ರದೇಶಕ್ಕೆ ನುಗ್ಗಿದ್ದ ದತ್ತಮಾಲಾಧಾರಿಗಳ ಗುಂಪು ಭಗವದ್ವಜ ಹಾರಿಸಿ ಗೋರಿಗಳನ್ನ ಧ್ವಂಸ ಮಾಡಿತ್ತು. ಇದರಿಂದ ಉದ್ರಿಕ್ತರಾದ ಮತ್ತೊಂದು ಸಮುದಾಯದ ಗುಂಪು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಾಟ ನಡೆಸಿತ್ತು. ಇದರಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಈ ಘಟನೆ ಸಂಬಂಧ 14 ಆರೋಪಿಗಳ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ.

ಇನ್ನು ಮತ್ತೊಂದೆಡೆ ಈ ಗಲಾಟೆ ಆದ ಮೇಳೆ ಕೆಲ ಯುವಕರು ಪೆಟ್ರೋಲ್ ಬಾಂಬ್ ನೊಂದಿಗೆ ದಾಳಿಗೆ ಮುಂದಾಗಿದ್ದರು. ಆಗ ಪೊಲೀಸರು ಯುವಕರನ್ನು ವಶಕ್ಕೆ ಪಡೆದಿದ್ರು. ಇದೆ ವಿಚಾರವನ್ನ ಮುಂದಿಟ್ಟಿರುವ ಶ್ರೀ ರಾಮ ಸೇನೆ ಪೆಟ್ರೋಲ್ ಬಾಂಬ್ ಕೇಸ್ ಎಲ್ಲಿಗೆ ಬಂತು? ಇದರ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸವಾಲು ಹಾಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ