AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ

ದತ್ತಪೀಠ ಕುರಿತು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ ಸಚಿವ ಸುನಿಲ್ ಕುಮಾರ್ ಇಂದು (ಅ.4) ದತ್ತಪೀಠಕ್ಕೆ ಭೇಟಿ ನೀಡಿದ್ದರು. ಸುನಿಲ್ ಕುಮಾರ್ ಹಿಂದಿನಿಂದಲೂ ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿದ್ದರು.

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ
ಸಚಿವ ಸುನಿಲ್​ಕುಮಾರ್ ಮತ್ತು ದತ್ತಪೀಠದ ಪ್ರವೇಶ ದ್ವಾರ
TV9 Web
| Edited By: |

Updated on: Oct 04, 2021 | 11:02 AM

Share

ಚಿಕ್ಕಮಗಳೂರು: ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ ಅಂತ ಸಚಿವ ಸಚಿವ ಸುನಿಲ್ ಕುಮಾರ್(Sunil Kumar) ಸೂಚಿಸಿದ್ದಾರೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಕೋರ್ಟ್ ನಿರ್ದೇಶನದ ಮೇರೆಗೆ ನಾನು ಸೂಚಿಸುತ್ತೇನೆ ಅಂತ ಐಡಿ ಪೀಠದಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ ಸಾಬೀತಾಗಿದೆ. ದತ್ತಪೀಠದಲ್ಲಿ ಹಿಂದುಗಳ ಮೂಲಕವೇ ಪೂಜೆಯಾಗಬೇಕು ಎಂಬ ನಿರ್ದೇಶನ ಕೊಟ್ಟಿದೆ. ಮುಸಲ್ಮಾನರು ಕಣ್ಣು ತೆರೆದು ನೋಡಬೇಕು. ನಿಮ್ಮ ನಾಗೇನಹಳ್ಳಿಯ ದರ್ಗಾವನ್ನು ನೀವು ಅಭಿವೃದ್ಧಿ ಮಾಡಿ ಅಂತ ಸುನಿಲ್ ಕುಮಾರ್ ಹೇಳಿದರು.

ದತ್ತಪೀಠ ಕುರಿತು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ ಸಚಿವ ಸುನಿಲ್ ಕುಮಾರ್ ಇಂದು (ಅ.4) ದತ್ತಪೀಠಕ್ಕೆ ಭೇಟಿ ನೀಡಿದ್ದರು. ಸುನಿಲ್ ಕುಮಾರ್ ಹಿಂದಿನಿಂದಲೂ ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿದ್ದರು. ಹಿಂದೂ ಅರ್ಚಕರನ್ನು ನೇಮಕ ಮಾಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿದ್ದವು. ಸದ್ಯ ಹೊಸ ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಕೋರ್ಟ್ ಸರ್ಕಾರಕ್ಕೆ ಬಿಟ್ಟಿದೆ.

ದತ್ತಪೀಠಕ್ಕೆ ಭೇಟಿ ಕೊಟ್ಟ ಬಳಿಕ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ಹೈಕೋರ್ಟ್ ಹಿಂದೂಗಳ ಭಾವನೆಗಳಿಗೆ ಪರವಾದ ತೀರ್ಪನ್ನು ಕೊಟ್ಟಿದೆ. ನಾನು ಮಂತ್ರಿಯಾದ ಸಂದರ್ಭದಲ್ಲಿ ಈ ತೀರ್ಪು ನೀಡಿರುವುದು ನನ್ನ ಜೀವನದ ಯೋಗ. ಈ ಹಿನ್ನೆಲೆಯಲ್ಲಿ ಅತ್ಯಂತ ಸಂತೋಷದಿಂದ ದತ್ತಾತ್ರೇಯನ ದರ್ಶನ ಮಾಡಿದ್ದೇನೆ ಎಂದು ಅಭಿಪ್ರಾಯಪಟ್ಟರು.

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ವಿರುದ್ಧದ ನಿರ್ಣಯ ತೆಗೆದುಕೊಂಡಿತು. ಮುಜಾವರ್ ನೇಮಕ ಮಾಡಿ ಹಿಂದೂ ವಿರೋಧಿಯಾಗಿ ನಡೆದುಕೊಂಡಿತು. ಈಗ ನ್ಯಾಯಾಲಯ ನಮ್ಮ ಪರವಾದ ತೀರ್ಪನ್ನು ನೀಡಿದೆ. ದತ್ತಪೀಠದಲ್ಲಿ ಮುಜಾವರ್ ಪೂಜೆ ಮಾಡೋದಲ್ಲ, ಹಿಂದೂ ಅರ್ಚಕರು ಪೂಜೆ ಮಾಡಬೇಕೆಂದು ಕೋರ್ಟ್ ಹೇಳಿದೆ. ಹಿಂದೂಗಳ ಭಾವನೆಗಳ ಪರವಾಗಿ ನಮ್ಮ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

ಬಾಬಾಬುಡನ್​ಗಿರಿ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ: ಹೈಕೋರ್ಟ್ ನಿರ್ದೇಶನ ಸ್ವಾಗತಿಸಿದ ಸುನಿಲ್​ಕುಮಾರ್

ಮೈಸೂರಿನಲ್ಲಿ ಬೋನಿಗೆ ಬಿತ್ತು ಹೆಣ್ಣು ಚಿರತೆ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ