AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣ; ಶಿರಸ್ತೇದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು

ತಹಶೀಲ್ದಾರ್ ಕಾರು ಚಾಲಕ, ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ವಿಜೇತ್ ನಿನ್ನೆ ಸಂಜೆ ತನ್ನ ಮನೆಯ ಅಡಿಕೆ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣ; ಶಿರಸ್ತೇದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು
ಕಾರು ಚಾಲಕ ವಿಜೇತ್(26)
TV9 Web
| Updated By: preethi shettigar|

Updated on:Jan 30, 2022 | 12:09 PM

Share

ಚಿಕ್ಕಮಗಳೂರು: ಕಳೆದ ಎರಡು ವರ್ಷಗಳಿಂದ ಶೃಂಗೇರಿಯಲ್ಲೇ ಠಿಕಾಣಿ ಹೂಡಿದ ತಹಶೀಲ್ದಾರ್​(Tahsildar) ಅಧಿಕಾರಿಯೊಬ್ಬರು, ಬೋಗಸ್​ ಹಕ್ಕು ಪತ್ರಗಳನ್ನು ನೀಡಿ ಜೈಲು ಸೇರಿದ್ದಾರೆ. ಈ ಬೆಳವಣಿಗೆ ನಡೆಯುತ್ತಿರುವ ಮಧ್ಯೆದಲ್ಲೇ ತಹಶೀಲ್ದಾರ್ ಕಾರು ಚಾಲಕ ಏಕಾಏಕಿ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಮೂಲಕ ಜನರನ್ನ ಮತ್ತಷ್ಟು ಆತಂಕಕ್ಕೆ ದೂಡಿದ್ದಾನೆ. ನಿನ್ನೆ (ಜನವರಿ 29) ಸಂಜೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹೆಗ್ತೂರಿನಲ್ಲಿ ಕಾರು ಚಾಲಕ(Car Driver) ವಿಜೇತ್(26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಶಿರಸ್ತೇದಾರ್ ಸೇರಿದಂತೆ ಮೂವರನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆಗೆ ಮುಂದಾಗಿದ್ದಾರೆ.

ಈ ಹಿಂದೆ ಇಲ್ಲಿ ತಹಶೀಲ್ದಾರ್ ಆಗಿದ್ದ ಅಂಬುಜಾ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಮಾಡಿದ್ದು, ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ತಂಡದಲ್ಲಿ ಕೆಲ ಕಚೇರಿ ಸಿಬ್ಬಂದಿಗಳು, ಪಿಡಿಓಗಳು, ಆರ್​ಐಗಳು ಸೇರಿದಂತೆ ದೊಡ್ಡದಾದ ಒಂದು ಧೂರ್ತಕೂಟವೇ ಇದೆ. ಈ ತಂಡ ಕಳೆದ ಕೆಲ ತಿಂಗಳಿನಿಂದ ಆಡಿದ ಆಟ, ಬಾಚಿದ ಹಣ ಲೆಕ್ಕಕ್ಕೆ ಇಲ್ಲ. ಬೋಗಸ್ ಹಕ್ಕುಪತ್ರಗಳನ್ನು ಸೃಷ್ಠಿ ಮಾಡಿ, ಕೇಳಿ ಕೇಳಿದವರಿಗೆ ಆ ಹಕ್ಕುಪತ್ರಗಳನ್ನು ಕೊಟ್ಟು ಒಬ್ಬೊಬ್ಬರಿಂದಲೂ 1ಲಕ್ಷ, 2 ಲಕ್ಷ, 3 ಲಕ್ಷ ರೂಪಾಯಿ  ಹೀಗೆ ಮನಸ್ಸಿಗೆ ಬಂದಷ್ಟು ಹಣವನ್ನು ಪಡೆದಿದ್ದಾರೆ.

ಒಂದು ಮೂಲಗಳ ಪ್ರಕಾರ 671ಕ್ಕೂ ಹೆಚ್ಚು ಬೋಗಸ್ ಹಕ್ಕುಪತ್ರಗಳನ್ನು ಮುಗ್ಧ ಜನರಿಗೆ ನೀಡಿ ವಂಚಿಸಿದ್ದಾರೆ.  ಈ ಸಂಬಂಧ ಇದೇ ಜನವರಿ 6ರಂದು ಎಸಿಬಿ ದಾಳಿ ಮಾಡಿ ತಹಶೀಲ್ದಾರ್ ಅಂಬುಜಾ ಸೇರಿದಂತೆ ಗ್ರಾಮ ಲೆಕ್ಕಿಗನೊಬ್ಬನನ್ನು ಬಲೆಗೆ ಕೆಡವಿತು. ಈ ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆದಲ್ಲಿ ತಹಶೀಲ್ದಾರ್ ಕಾರು ಚಾಲಕ, ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ವಿಜೇತ್ ನಿನ್ನೆ ಸಂಜೆ ತನ್ನ ಮನೆಯ ಅಡಿಕೆ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನಿನ್ನೆಯಷ್ಟೇ ತಹಶೀಲ್ದಾರ್ ಮತ್ತು ತಂಡದ ಅಕ್ರಮ ಕುರಿತು ಎಸಿ ತನಿಖೆ ಶುರುಮಾಡಿದ್ದರು. ಹೀಗಿರುವಾಗಲೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಈ ಮಧ್ಯೆ ತಹಶೀಲ್ದಾರ್ ಅಂಬುಜಾ, ಜೈಲಿಗೆ ಹೋಗಿ ಇದೀಗ ಬೇಲು ತೆಗೆದುಕೊಂಡು ಆರಾಮವಾಗಿ ಮನೆಯಲ್ಲಿದ್ದಾರೆ. ಆದರೀಗ ತಹಶೀಲ್ದಾರ್ ಕಾರು ಚಾಲಕ ವಿಜೇತ್ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ತಹಶೀಲ್ದಾರ್ ಸೇರಿದಂತೆ ಶೃಂಗೇರಿಯ ಕಚೇರಿಯಲ್ಲಿ ದೊಡ್ಡದಾಗಿ ಬೇರೂರಿರುವ ಬ್ರೋಕರ್​ಗಳಿಗೆ ವಿಜೇತ್​ಗೂ ಮೋಸವಾಗಿದ್ಯಾ ಎನ್ನುವ ಪ್ರಶ್ನೆ ಮೂಡಿದೆ. ಹೀಗಾಗಿ ಮೃತರ ಸಂಬಂಧಿರಕರು, ಜನಸಾಮಾನ್ಯರು ವಿಜೇತ್ ಸಾವಿಗೆ ಸೂಕ್ತ ಪರಿಹಾರ ನೀಡುವಂತೆ ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದ್ದರು.

ಮೃತ ಚಾಲಕ ವಿಜೇತ್ ಸಂಬಂಧಿಕರು, ಜನರಿಂದ ಪ್ರತಿಭಟನೆ

ಶೃಂಗೇರಿಯಲ್ಲಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಾಲಕ ವಿಜೇತ್ ಸಂಬಂಧಿಕರು ಹಾಗೂ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಚಿಕ್ಕಮಗಳೂರು ಡಿಸಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡೆತ್‌ನೋಟ್‌ನಲ್ಲಿ ವಿಜೇತ್​ ಮೂವರ ಹೆಸರು ಉಲ್ಲೇಖಿಸಿದ್ದಾನೆ. ಹೀಗಾಗಿ ವಿಜೇತ್ ಸಾವಿಗೆ ಕಾರಣರಾದವರನ್ನು ಬಂಧಿಸಲು ಹಾಗೂ ವಿಜೇತ್ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವಂತೆ ಧರಣಿನಿರತರು ಆಗ್ರಹಿಸಿದ್ದಾರೆ.

ವರದಿ: ಪ್ರಶಾಂತ್

ಇದನ್ನೂ ಓದಿ: ಶೃಂಗೇರಿ: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಪ್ರಕರಣ ತನಿಖೆಗೆ ಆಗ್ರಹಿಸಿ ಕುಟುಂಬಸ್ಥರು, ಸ್ಥಳಿಯರ ಧರಣಿ

ಮೊಮ್ಮಗಳು ಆತ್ಮಹತ್ಯೆ ಹಿನ್ನೆಲೆ: ಬಿಎಸ್ ಯಡಿಯೂರಪ್ಪಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡ

Published On - 9:17 am, Sun, 30 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ