AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ: “ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಕಲ್ಲು ಹೊಡೆಯಬಹುದಿತ್ತು”; ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ವೈರಲ್​

ರಾಜೀನಾಮೆ ವಿಚಾರ ಕಿವಿಗೆ ಬೀಳುತ್ತಿದ್ದಂತೆ ತೇಜಸ್ವಿ ಸೂರ್ಯ ಸಂದೀಪ್​​ಗೆ ಕರೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದಿರುವ ತೇಜಸ್ವಿ ಸೂರ್ಯ ಹೇಳಿಕೆ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಕಲ್ಲು ಹೊಡೆಯಬಹುದಿತ್ತು; ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ವೈರಲ್​
ಸಂಸದ ತೇಜಸ್ವಿ ಸೂರ್ಯ
TV9 Web
| Edited By: |

Updated on:Jul 28, 2022 | 1:08 PM

Share

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆಯಿಂದಾಗಿ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಈ ವಿಚಾರವಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್​​ಗೆ ತೇಜಸ್ವಿ ಸೂರ್ಯ ಕರೆ ಮಾಡಿದ್ದಾರೆ. ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಸಂದೀಪ್ ಜೊತೆ ಫೋನ್ನಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ವೈರಲ್ ಆಗಿದೆ. ಪ್ರವೀಣ್ ಹತ್ಯೆ ಖಂಡಿಸಿ ನಿನ್ನೆ ಬೆಳಗ್ಗೆಯೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು, ಜಿಲ್ಲೆಯ ಯುವ ಮೋರ್ಚಾದ ನಿರ್ಧಾರಕ್ಕೆ ತೇಜಸ್ವಿ ಸೂರ್ಯ ತಬ್ಬಿಬ್ಬಾಗಿದ್ದಾರೆ. ರಾಜೀನಾಮೆ ವಿಚಾರ ಕಿವಿಗೆ ಬೀಳುತ್ತಿದ್ದಂತೆ ತೇಜಸ್ವಿ ಸೂರ್ಯ ಸಂದೀಪ್​​ಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದಿರುವ ತೇಜಸ್ವಿ ಸೂರ್ಯ ಹೇಳಿಕೆ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ: ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಸಾಧ್ಯವಾ..? ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

21 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸ್​

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರಿ ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರ ಪೈಕಿ ಕೋಮು ಅಹಿತಕರ ಘಟನೆಗಳು ನಡೆದಾಗ ಸಾಮಾನ್ಯವಾಗಿ ಹೆಸರು ಕೇಳಿಬರುವ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳಿಗೆ ಸೇರಿದವರು ಕೂಡ ಒಳಗೊಂಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್​ ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ ಎಂದರು.

ಇದನ್ನೂ ಓದಿ: 144 ಸೆಕ್ಷನ್ ಜಾರಿಯಲ್ಲಿದ್ದರೂ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಹೋಗುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಪ್ರವೀಣ್ ಪತ್ನಿ ಒತ್ತಾಯ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಮೃತ ಪ್ರವೀಣ್ ಪತ್ನಿ ನೂತನಾ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಟಿವಿ9 ಜೊತೆ ಮಾತನಾಡಿದ ಅವರು, ನನ್ನ ಪತಿ ಯಾರಿಗೂ ಅನ್ಯಾಯ ಮಾಡಲಿಲ್ಲ. ಇಡೀ ಸಮಾಜಕ್ಕಾಗಿ ಅವರು ಬದುಕಿದ್ದರು. ನನ್ನ ಪತಿಯ ಕೊಲೆ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಬೇಕು. ಎನ್​ಐಎ ತನಿಖೆಯಿಂದ ಮಾತ್ರ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

Published On - 1:05 pm, Thu, 28 July 22

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!