AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಮಂಗಗಳ ಮಾರಣ ಹೋಮ: ಮತ್ತುಬರಿಸಿ ಹೊಡೆದು ಕೊಂದ ವಿಕೃತಿ ಮನಸ್ಸಿನ ಅಟ್ಟಹಾಸ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು ಬಳಿಕ 30 ಮಂಗಗಳನ್ನ ಕೊಂದ ಹಾಕಿರುವ ಅಮಾನವೀಯ ಘಟನೆ ನಡೆದಿದೆ.

30 ಮಂಗಗಳ ಮಾರಣ ಹೋಮ: ಮತ್ತುಬರಿಸಿ ಹೊಡೆದು ಕೊಂದ ವಿಕೃತಿ ಮನಸ್ಸಿನ ಅಟ್ಟಹಾಸ
ಚಿಕ್ಕಮಗಳೂರಿನಲ್ಲಿ ಮತ್ತುಬರಿಸಿ 30 ಮಂಗಗಳನ್ನು ಹೊಡೆದು ಕೊಂದ ಕಿಡಿಗೇಡಿಗಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jun 07, 2024 | 4:36 PM

Share

ಚಿಕ್ಕಮಗಳೂರು, ಜೂ.07: ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ(Monkey) ಕೊಂದ ಹಾಕಿದ ಅಮಾನವೀಯ ಘಟನೆಯ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಎನ್​​.ಆರ್​.ಪುರ ತಾಲೂಕಿನ ದ್ಯಾವಣ ಗ್ರಾಮದ ನಡೆದಿದೆ. ಬಳಿಕ ಅವುಗಳನ್ನು ತಂದು ರಸ್ತೆಗೆ ಎಸೆದು ಹೋಗಿದ್ದಾರೆ. ಹೌದು, ಬಾಳೆಹಣ್ಣು ತಿಂದು ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು 16 ಗಂಡು, 14 ಹೆಣ್ಣು ಹಾಗೂ 4 ಮರಿಗಳನ್ನು ಹತ್ಯೆ ಮಾಡಲಾಗಿದೆ.

ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ

ಇನ್ನು 30 ಮಂಗಗಳ ತಲೆಯಲ್ಲೂ ಒಂದೇ ರೀತಿಯ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನಿಡಿದ್ದು, ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ, ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ ಅಧಿಕಾರಿಗಳು ಹಾಗೂ ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇತ್ತ ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿಕಾರಿದ್ದಾರೆ. ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ವಿಡಿಯೋ ನೋಡಿ: ಗ್ರಾ ಪಂ ಮಹಿಳಾ ಅಧಿಕಾರಿಯ ಆ ಒಂದು ಉಪಾಯದಿಂದ ಮಂಗಗಳ ಕಾಟ ದೂರವಾಯಿತು! ಏನದು?

ಈ ಬಾರಿಯ ರಣಬಿಸಿಲಿಗೆ ಕೋತಿಯೊಂದು ಆಹಾರ ಹುಡುಕಾಡುವ ದೃಶ್ಯ ಕರಳು ಹಿಂಡುವಂತಿತ್ತು

ಈ ಬಾರಿಯ ರಣ ಬಿಸಿಲಿಗೆ ಮನುಷ್ಯರಷ್ಟೇ ಅಲ್ಲದೆ ಪ್ರಾಣಿಗಳು ಕೂಡ ಹೈರಾಣವಾಗಿತ್ತು. ಗದಗ ಜಿಲ್ಲೆಯಲ್ಲಿ ಕೋತಿಯೊಂದು ಆಹಾರ ಹುಡುಕಾಡುವ ದೃಶ್ಯ ಕರಳು ಚುರ್ ಎನ್ನುವಂತಿತ್ತು. ಬೈಕ್ ಮೇಲೆ ಹತ್ತಿದ ಕೋತಿ ಬ್ಯಾಗ್​ನಲ್ಲಿ ಏನಾದರೂ ಇದ್ರೆ ತಿಂದು ಬಿಡೋಣ ಎಂದು ಹುಡುಕಾಡುತ್ತಿರೋ ದೃಶ್ಯ ಮನಕಲುಕುವಂತಿತ್ತು. ಕೋತಿಗಳ ಸ್ಥಿತಿ ನೋಡಿ ಟಿವಿ9 ತಂಡ ಬಾಳೆ ಹಣ್ಣುಗಳ ನೀಡುವ ಮೂಲಕ ಪ್ರಾಣಿಗಳ ಸ್ವಲ್ಪ ಮಟ್ಟಿನ ಹಸಿವು ನೀಗಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 7 June 24

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​