AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಶೃಂಗೇರಿ ಕ್ಷೇತ್ರ ಬಂದ್​ಗೆ ಕರೆ; ಸಂಪೂರ್ಣ ಸ್ತಬ್ಧವಾಗಲಿರುವ ಚಿಕ್ಕಮಗಳೂರು ಜಿಲ್ಲೆಯ ಈ ಮೂರು ತಾಲ್ಲೂಕುಗಳು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿಗರಿಗೆ ಒತ್ತುವರಿ ತೆರವಿನ ಆತಂಕ ಶುರುವಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಮಲೆನಾಡು ಭಾಗದಲ್ಲಿ ಸೃಷ್ಟಿಯಾದ ಅವಾಂತರಗಳಿಗೂ, ವಯನಾಡಿನಲ್ಲಿ ಸಂಭವಿಸಿದ ದುರಂತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವಿಗೆ ಆದೇಶ ಮಾಡಿತ್ತು. ಅದೇ ಆದೇಶ ಮಲೆನಾಡಿಗರನ್ನ ನಿದ್ದೆಗೆಡಿಸಿದ್ದು, ಶೃಂಗೇರಿ ಕ್ಷೇತ್ರ ಬಂದ್​ಗೆ ಕರೆ ನೀಡಲಾಗಿದೆ.

ನಾಳೆ ಶೃಂಗೇರಿ ಕ್ಷೇತ್ರ ಬಂದ್​ಗೆ ಕರೆ; ಸಂಪೂರ್ಣ ಸ್ತಬ್ಧವಾಗಲಿರುವ ಚಿಕ್ಕಮಗಳೂರು ಜಿಲ್ಲೆಯ ಈ ಮೂರು ತಾಲ್ಲೂಕುಗಳು
ಶೃಂಗೇರಿ ಕ್ಷೇತ್ರ ಬಂದ್​ಗೆ ಕರೆ,
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 16, 2024 | 9:27 PM

Share

ಚಿಕ್ಕಮಗಳೂರು, ಆ.16: ರಾಜ್ಯ ಸರ್ಕಾರ ಆದೇಶ ನೀಡಿರುವ ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನಲ್ಲಿ ವಿರೋಧ ವ್ಯಕ್ತವಾಗಿದೆ. ಕೊಪ್ಪ, NR ಪುರ ತಾಲೂಕು ಒಳಗೊಂಡ ಶೃಂಗೇರಿ ಕ್ಷೇತ್ರ ಬಂದ್(Sringeri Bandh)​ಗೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿದೆ. ಈ ಬಂದ್​ಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಸರ್ವ ಸಂಘಟನೆಗಳ ಬೆಂಬಲ ವ್ಯಕ್ತವಾಗಿದ್ದು, ನಾಳೆ(ಶನಿವಾರ) ಶೃಂಗೇರಿ ಕ್ಷೇತ್ರ ಬಂದ್ ನಡೆಸಲು ಸಿದ್ದತೆ ನಡೆಸಲಾಗಿದೆ.

ತುರ್ತು ಸೇವೆ ಹೊರತುಪಡಿಸಿ ಇನ್ನುಳಿದ ಸೇವೆಗಳು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಸುರಿದ ಮಳೆಯಿಂದ ಸಾಲು ಸಾಲು ಅನಾಹುತ ಸೃಷ್ಟಿಯಾಗಿತ್ತು. ಮಲೆನಾಡು ಭಾಗದಲ್ಲಿ ಗುಡ್ಡ, ಭೂ ಕುಸಿತ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸಿದ್ದು, ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಆದೇಶ ನೀಡಿ. ಒಂದು ತಿಂಗಳೊಳಗೆ ಒತ್ತುವರಿ ತೆರವು ಮಾಡಲು ಜಿಲ್ಲಾಡಳಿತ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒತ್ತುವರಿಯಾಗಿದ್ದ ನೂರಾರು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ಮಲೆನಾಡಿನಲ್ಲಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ರಾಜ್ಯ ಸರ್ಕಾರದ 1.40 ಕೋಟಿ ಎಕರೆ ಜಮೀನು: ಒತ್ತುವರಿ ಆಗಿದ್ದೆಷ್ಟು?

ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವು ಸಂಬಂಧಿಸಿದಂತೆ ಜಿಲ್ಲಾಡಳಿತ, ಅರಣ್ಯ ಇಲಾಖೆಗೆ ಗೊಂದಲವಿದ್ದು, ಕಂದಾಯ, ಅರಣ್ಯ ಭೂಮಿ ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೇಗೆ ಸರ್ಕಾರ ಈ ಹಿಂದೆ ಆದೇಶ ನೀಡಿತ್ತು. ಆದ್ರೆ, ಜಂಟಿ ಸರ್ವೇ ನಡೆಸದೆ ಅರಣ್ಯ ಭೂಮಿ ಒತ್ತುವರಿ ತೆರವಿಗೆ ವಿರೋಧ ವ್ಯಕ್ತವಾಗಿದೆ. ರೈತರ ತೋಟಗಳ ತೆರವಿಗೂ ಮುನ್ನ ಪ್ರಭಾವಿಗಳ ತೋಟ, ರೆಸಾರ್ಟ್, ಹೋಂ ಸ್ಟೇ ತೆರವು ಮಾಡುವಂತೆ ಪಟ್ಟು ಹಿಡಿದಿದ್ದು, ನಾಳೆ ಶೃಂಗೇರಿ ಕ್ಷೇತ್ರ ಸಂಪೂರ್ಣ ಬಂದ್ ಮಾಡಲು ಸಿದ್ದತೆ ನಡೆಸಲಾಗಿದೆ. ಕೊಪ್ಪ ,NR ಪುರ ,ಶೃಂಗೇರಿ ತಾಲೂಕು ಬಂದ್ ಮಾಡಿ ಕೊಪ್ಪ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Fri, 16 August 24

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!