AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ವೇದಿಕೆಯ ಮೇಲೆ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ರಾಜೇಗೌಡ, ಕುಟುಂಬಕ್ಕೆ ಎದುರಾಗಿರುವ ಸಂಕಷ್ಟಗಳನ್ನು ಹೇಳುತ್ತಾ ಅತ್ತರು. ಮಾಜಿ ಸಚಿವ ಡಿಎನ್‌ ಜೀವರಾಜ್‌ ಹೆಸರು ಹೇಳದೇ ಆಕ್ರೋಶ ಹೊರಹಾಕಿದ್ದು, ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ
Mla Td Rajegowda
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 03, 2026 | 9:00 PM

Share

ಚಿಕ್ಕಮಗಳೂರು, (ಮಾರ್ಚ್ 03): ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ ಎಂದು ಶೃಂಗೇರಿ ಶಾಸಕ ಶಾಸಕ ಟಿಡಿ ರಾಜೇಗೌಡ (sringeri congress mla TD Rajegowda) ಬಹಿರಂಗ ಕಾರ್ಯಕ್ರಮದಲ್ಲೇ ಗಳಗಳನೇ ಅತ್ತಿರುವ ಪ್ರಸಂಗ ನಡೆದಿದೆ. ಬಾಳೆಹೊನ್ನೂರಿನಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಿನ್ನೆ (ಮಾರ್ಚ್ 02) ಹಮ್ಮಿಕೊಂಡಿದ್ದ ಶೃಂಗೇರಿ ಕ್ಷೇತ್ರದ ರೈತರ, ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ನಡೆದ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿಡಿ ರಾಜೇಗೌಡ ಅವರು ಬಿಜೆಪಿ ಮಾಜಿ ಸಚಿವ ಡಿಎನ್‌ ಜೀವರಾಜ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇಬ್ಬರೂ ಮುಂದಿನ ಚುನಾವಣೆಗೆ ನಿಲ್ಲುವುದು ಬೇಡ ಎಂದು ಆಕ್ರೋಶ ಹೊರಹಾಕಿದ್ದಾರೆ.

ಜನಾಂದೋಲನ ಸಮಾವೇಶದಲ್ಲಿ ಕಣ್ಣೀರಿಟ್ಟ ಶಾಸಕ

ಮುಂದೆ ಚುನಾವಣೆಗೆ ಸ್ಪರ್ಧಿಸದಿದ್ದರೂ ಜೀವ ಕೊಟ್ಟ ಕ್ಷೇತ್ರದ ಜನರಿಗಾಗಿ ದುಡಿಯುತ್ತೇನೆ. ನನ್ನ ಜೀವ ತಿಂದಿದ್ದೀರ, ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ. ನಾನು ಚುನಾವಣೆಗೆ ನಿಲ್ಲುವುದಿಲ್ಲ. ನೀವು ಯಾರಾದರೂ ನಿಲ್ಲಿ ಎಂದು ಗದ್ಗದಿತರಾದ ರಾಜೇಗೌಡ, ಕೆಟ್ಟ ಮನಸ್ಥಿತಿಯ ಮನುಷ್ಯ ಕ್ಷೇತ್ರದಲ್ಲಿ ಮತ್ತೆ ಶಾಸಕನಾಗಬಾರದು. ಆದರೆ ಕ್ಷೇತ್ರಕ್ಕೆ ದೊಡ್ಡ ಮಾರಕ. ಯಾರ ಮನೆ ಹೆಣ್ಣು ಮಕ್ಕಳಿಗೆ ಏನು ಮಾಡುತ್ತಾರೋ ಗೊತ್ತಿಲ್ಲ. ಎಲ್ಲೂ ಮುಕ್ತವಾಗಿ ಯಾರೂ ಓಡಾಡುವಂತಿಲ್ಲ ಎಂದು ಮಾಜಿ ಶಾಸಕ ಡಿ ಎನ್ ಜೀವರಾಜ್ ಹೆಸರು ಹೇಳದೆಯೇ ಕಣ್ಣೀರಿಟ್ಟಿದ್ದಾರೆ.

ಮಾಜಿ ಎಂಎಲ್​​ಗೆ ಹಾಲಿ ಶಾಸಕ ಸವಾಲ್

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡುತ್ತಿದ್ದಾರೆ, ನಾನು ಈ ಸಮಾವೇಶದ ಮೂಲಕ ಒಂದು ಘೋಷಣೆ ಮಾಡುತ್ತಿದ್ದೇನೆ. ಈ ಕ್ಷೇತ್ರದಲ್ಲಿ ಜನರಿಗೆ ವಿನಾಕಾರಣ ತೊಂದರೆ ಕೊಡುತ್ತಾ, ಮಹಿಳೆಯರಿಗೆ ತೊಂದರೆ ಕೊಟ್ಟಿರುವುದನ್ನು ಮನದಟ್ಟು ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಲ್ಲ ಅಂತ ಘೋಷಣೆ ಮಾಡಲಿ ಎಂದು ಜೀವರಾಜ್ ಹೆಸರು ಹೇಳದೇ ಶಾಸಕ ರಾಜೇಗೌಡ ಸವಾಲು ಹಾಕಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್