AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಅಮಾನತು

ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ.

ಹುಲಿ ಉಗುರು ವಿವಾದ: ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಅಮಾನತು
ಡಿಆರ್​ಎಫ್​ಒ ದರ್ಶನ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 27, 2023 | 2:02 PM

Share

ಚಿಕ್ಕಮಗಳೂರು ಅ.27: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಹುಲಿ ಉಗುರು (Tiger Claw) ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ (Sandalwood) ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿಬಂದಿದೆ. ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ (DRFO) ದರ್ಶನ್ ಅವರ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ. ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ (DRFO) ದರ್ಶನ್‌ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮಕೈಗೊಳ್ಳಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ಏನಿದು ಹುಲಿ ಉಗುರು ವಿವಾದ

ಹುಲಿ ಉಗುರು ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆತಂದಿದ್ದಾರೆ. ಸದ್ಯ ವರ್ತೂರು ಸಂತೋಷ್​​​ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರ ಬಂಧನ ಬಳಿಕ ಹುಲಿ ಉಗುರು ಪ್ರಕರಣದ ರಾಜ್ಯದಲ್ಲಿ ಒಂದು ಮಟ್ಟಿಗೆ ಕಾವು ಎದ್ದಿತ್ತು. ಆದರೆ ಯಾವಾಗ ಕನ್ನಡದ ಖ್ಯಾತ ಚಲನಚಿತ್ರ ನಟರೂ ಹುಲಿ ಉಗುರು ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು ಈ ಕಾವು ಜಾಸ್ತಿ ಆಯ್ತು.

ಇದನ್ನೂ ಓದಿ: ಆರ್​ಎಫ್​ಒ ವಿರುದ್ಧ ಕೇಳಿಬಂತು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ

ಹೌದು ಚಿತ್ರನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ, ನಟ ಜಗ್ಗೇಶ್​, ನಟ ನಿಖಿಲ್​ ಕುಮಾರಸ್ವಾಮಿ, ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರದಾಡಲು ಆರಂಭಸಿದವು. ಇದನ್ನು ಕಂಡು ಪ್ರಾಣಿಪ್ರಿಯರು ಮತ್ತು ಸಂಘಟನೆಯವರು ಅರಣ್ಯ ಅಧಿಕಾರಿಗಳಿಗೆ ದೂರು ನೀಡಲು ಆರಂಭಿಸಿದರು. ಅದರಂತೆ ಅರಣ್ಯ ಅಧಿಕಾರಿಗಳು ನಟರ ಮನೆಗಳಿಗೆ ತೆರಳಿ ಶೋಧ ನಡೆಸಿದ್ದರು.

ಈ ಹುಲಿ ಉಗುರಿನ ನಂಜು ರಾಜಕಾರಣಿಗಳಿಗೂ ಅಂಟಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ, ​ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗಿದೆ. ಅಧಿಕಾರಿಗಳು ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.

ಇನ್ನು ಲಕ್ಷ್ಮಿ ಹೆಬ್ಬಾಳ್ಕರ್​ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪೋಟೋ ವೈರಲ್​ ಆಗಿದೆ. ಅಲ್ಲದೆ ವಿಜಯಪುರದಲ್ಲಿ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಕೂಡ ಹುಲಿ ಉಗುರು ಧರಿಸಿರುವ ಫೋಟೋ ವೈರಲ್​​ ಆಗಿದೆ. ಇದನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Fri, 27 October 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್