AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗಾಗಿ ರಸ್ತೆಯಲ್ಲೇ ಪ್ರವಾಸಿಗರ ಹುಚ್ಚಾಟ,​​​ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಟ

ಸೆಲ್ಫಿ, ಫೋಟೋಗಳಿಗಾಗಿ ರಸ್ತೆಯಲ್ಲೇ ಪ್ರವಾಸಿಗರು ತಮ್ಮ ವಾಹನಗಳನ್ನು ಪಾರ್ಕಿಂಗ್​ ಮಾಡಿದ್ದರ ಪರಿಣಾಮ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಡುವಂತಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಘಟನೆ ಕಂಡುಬಂದಿದೆ.

ಗಂಗಾಧರ​ ಬ. ಸಾಬೋಜಿ
|

Updated on:Jun 23, 2023 | 11:39 AM

Share

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ (Charmadi Ghat)ಯ ಸೆಲ್ಫಿ, ಫೋಟೋಗಳಿಗಾಗಿ ರಸ್ತೆಯಲ್ಲೇ ಪ್ರವಾಸಿಗರು ತಮ್ಮ ವಾಹನಗಳನ್ನು ಪಾರ್ಕಿಂಗ್​ ಮಾಡಿದ್ದರ ಪರಿಣಾಮ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಡುವಂತಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಘಟನೆ ಕಂಡುಬಂದಿದೆ. ಬಣಕಲ್ ಗ್ರಾಮದಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್​ನಿಂದ ಚಾರ್ಮಾಡಿ ಘಾಟ್​ನಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿದೆ.

ಸಮುದ್ರದಲ್ಲಿ ಮುಳಗುತ್ತಿದ್ದ ಪ್ರವಾಸಿಯ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಮುಳಗುತ್ತಿದ್ದ ಪ್ರವಾಸಿಯೊಬ್ಬನನ್ನು ಕಾರವಾರದ ಕೋಸ್ಟ್​ಗಾರ್ಡ್​​ ಬದುಕುಳಿಸಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಬೋಟ್​ನಲ್ಲಿ ಸಮುದ್ರ ತೀರಕ್ಕೆ ತರುತ್ತಿರುವ ದೃಶ್ಯವನ್ನು ತೀರದಲ್ಲಿದ್ದ ಪ್ರವಾಸಿಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದರು. ಬದುಕುಳಿದ ವ್ಯಕ್ತಿ ಅಧೀರ ಮತ್ತು ವಿಚಲಿತನಾಗಿರುವುದನ್ನು ಗುರುತಿಸಬಹುದು.

ಇದನ್ನೂ ಓದಿ: ಉಡುಪಿ: ಮಲ್ಪೆ ಬೀಚ್​​ ದಡಕ್ಕೆ ತೇಲಿಬಂದ ನೂಡಲ್ ಮಾದರಿಯ ವಸ್ತು, ಹೆಚ್ಚಿನ ಅಧ್ಯಯನಕ್ಕಾಗಿ ಗೋವಾಕ್ಕೆ ರವಾನೆ

ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ: ಬಡರೋಗಿಗಳ ಪರದಾಟ

ಬೆಂಗಳೂರು ಗ್ರಾಮಾಂತರ: ಆ್ಯಂಬುಲೆನ್ಸ್​​​ ಸಿಬ್ಬಂದಿ ಕಮಿಷನ್​​ ಆಸೆಗಾಗಿ ಬಡರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸದೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಒಂದೇ ದಿನಕ್ಕೆ 30 ಸಾವಿರ ರೂ. ಬಿಲ್​​ ಮಾಡಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿಯಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಖಾಸಗಿ ಆಸ್ಪತ್ರೆಯವರು ನೀಡುವ ಕಮಿಷನ್​ ಆಸೆಗಾಗಿ ಪ್ರತಿ ಬಾರಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ 108 ಸಿಬ್ಬಂದಿ ದಾಖಲಿಸುತ್ತಿದ್ದ ಎನ್ನಲಾಗಿದೆ. ಕಮಿಷನ್​ ಆಸೆಗಾಗಿ ರೋಗಿಗಳೊಂದಿಗೆ ಚೆಲ್ಲಾಟ ಮಾಡಿದ್ದು, ಬಡರೋಗಿಗಳು ಪರದಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 am, Fri, 23 June 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?