AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತ ಟ್ರ್ಯಾಕ್ಟರ್​ ಹಿಮ್ಮುಖವಾಗಿ ಚಲಿಸಿ ಪಲ್ಟಿ; ಜಿಗಿದು ಬಚಾವಾದ ಚಾಲಕ

ಹಿಂಬದಿ ಚಕ್ರಕ್ಕೆ ಕಲ್ಲು ಕೊಟ್ಟಿದ್ದರೂ ಏರು ಹತ್ತಲಾಗದೆ ಟ್ರ್ಯಾಕ್ಟರ್​ ಹಿಂದೆ ಬಂದಿದ್ದು ಸುತ್ತಲೂ ನಿಂತಿದ್ದವರು ನೋಡುತ್ತಿರುವಾಗಲೇ ಹಿಮ್ಮುಖವಾಗಿ ಚಲಿಸಿ ಪಲ್ಟಿ ಹೊಡೆದಿದೆ. ಗಾಡಿ ಹಿಂದೆ ಹೋಗುತ್ತಿದ್ದಂತೆಯೇ ಚಾಲಕ ಕೆಳಗೆ ಜಿಗಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತ ಟ್ರ್ಯಾಕ್ಟರ್​ ಹಿಮ್ಮುಖವಾಗಿ ಚಲಿಸಿ ಪಲ್ಟಿ; ಜಿಗಿದು ಬಚಾವಾದ ಚಾಲಕ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಟ್ರ್ಯಾಕ್ಟರ್​
TV9 Web
| Updated By: Skanda|

Updated on:Aug 22, 2021 | 3:48 PM

Share

ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್​ನ ಬ್ರೇಕ್​ ಫೇಲ್ಯೂರ್​ ಆಗಿ ನೋಡನೋಡುತ್ತಲೇ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್​ನಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕಾರಣ ಲೋಡ್​ ಹೆಚ್ಚಾಗಿದ್ದು, ರಸ್ತೆಯಲ್ಲಿ ಒಂದು ತಿರುವನ್ನು ದಾಟಿ ತುಸು ಏರು ಪ್ರದೇಶದಲ್ಲಿ ಹತ್ತುವಾಗ ಟ್ರ್ಯಾಕ್ಟರ್​ ನಿಂತಿದೆ. ನಂತರ ಚಾಲಕ ಎಷ್ಟೇ ಪ್ರಯತ್ನಿಸಿದರೂ ಮುಂದೆ ಹೋಗಿಲ್ಲ. ಹಿಂಬದಿ ಚಕ್ರಕ್ಕೆ ಕಲ್ಲು ಕೊಟ್ಟಿದ್ದರೂ ಏರು ಹತ್ತಲಾಗದೆ ಟ್ರ್ಯಾಕ್ಟರ್​ ಹಿಂದೆ ಬಂದಿದ್ದು ಸುತ್ತಲೂ ನಿಂತಿದ್ದವರು ನೋಡುತ್ತಿರುವಾಗಲೇ ಹಿಮ್ಮುಖವಾಗಿ ಚಲಿಸಿ ಪಲ್ಟಿ ಹೊಡೆದಿದೆ. ಗಾಡಿ ಹಿಂದೆ ಹೋಗುತ್ತಿದ್ದಂತೆಯೇ ಚಾಲಕ ಕೆಳಗೆ ಜಿಗಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಲ್ಲದೇ, ಟ್ರ್ಯಾಕ್ಟರ್​ ಹಿಂಭಾಗದಲ್ಲಿ ಕೆಲ ಜನರು ರಸ್ತೆಯಲ್ಲೇ ನಿಂತಿದ್ದರು. ಅದೃಷ್ಟವಶಾತ್​, ಗಾಡಿ ಚಾಲಕನ ನಿಯಂತ್ರಣ ತಪ್ಪುತ್ತಿದ್ದಂತೆಯೇ ಅವರೂ ಅಲ್ಲಿಂದ ಓಡಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಹಿಮ್ಮುಖವಾಗಿ ಚಲಿಸಿದ ಟ್ರ್ಯಾಕ್ಟರ್​ ಪಲ್ಟಿಯಾಗುವ ಮೊದಲು ಅದರ ಕೆಳ ಭಾಗದಲ್ಲಿ ಪಟಾಕಿ ಸಿಡಿದ ರೀತಿಯಲ್ಲೇ ಸದ್ದು ಬಂದಿದ್ದು ನೆರೆದಿದ್ದವರು ಗಾಬರಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಜೀವಹಾನಿಯಾಗಿಲ್ಲ.

TRACTOR BREAK FAILURE

ಟ್ರ್ಯಾಕ್ಟರ್​ನಿಂದ ಜಿಗಿದು ಬಚಾವಾದ ಚಾಲಕ

ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲಿ ಬೈಕ್​ಗೆ ಬೆಂಕಿ ಆನೇಕಲ್: ಕೇಂದ್ರ ಸಚಿವ ನಾರಾಯಣಸ್ವಾಮಿ ಅವರ ಜನಾಶೀರ್ವಾದ ಯಾತ್ರೆ ವೇಳೆ ಪಟಾಕಿ ಸಿಡಿಸುವಾಗ ಅಚಾತುರ್ಯದಿಂದ ಬೈಕ್​ಗೆ ಬೆಂಕಿ ತಗುಲಿ ಅದು ಹೊತ್ತಿ ಉರಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಅವರನ್ನು ಸ್ವಾಗತಿಸಲು ಪಟಾಕಿ ಸಿಡಿಸಿದ ಪರಿಣಾಮ ಅನಾಹುತ ಸಂಭವಿಸಿದೆ.

ವಿಜಯೋತ್ಸವ ಮಾಡುತ್ತಿದ್ದ ವೇಳೆ ಪಟಾಕಿ ಹಚ್ಚಿದ ಬಿಜೆಪಿ ಕಾರ್ಯಕರ್ತರು ಬೈಕ್​ಗೆ ಬೆಂಕಿ ತಗುಲಿತ್ತಿದ್ದಂತೆಯೇ ತಕ್ಷಣ ಎಚ್ಚೆತ್ತು ಬೆಂಕಿ ನಂದಿಸಲು ಧಾವಿಸಿದ್ದಾರೆ. 220 ಪಲ್ಸರ್ ಬೈಕ್​ಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಯಕರ್ತರು ತಕ್ಷಣ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಅದೃಷ್ಟವಶಾತ್​ ಕೂಡಲೇ ಎಲ್ಲರೂ ಎಚ್ಚೆತ್ತುಕೊಂಡ ಕಾರಣ ಬೇರೆ ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ.

ಇದನ್ನೂ ಓದಿ: ಕುಣಿದು ಕುಪ್ಪಳಿಸಿ ಪಟಾಕಿ ಹೊಡೆದು ಸಂಭ್ರಮಿಸಿದ ಮಂಜು ಪಾವಗಡ ಅಭಿಮಾನಿಗಳು; ಸಂಭ್ರಮಾಚರಣೆಯ ಝಲಕ್ ಇಲ್ಲಿದೆ 

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ಯಾಂಕರ್; ಬೆಂಕಿ ನಂದಿಸಿ, ಆತಂಕ ದೂರ ಮಾಡಿದ ಅಗ್ನಿ ಶಾಮಕ ಸಿಬ್ಬಂದಿ

(Tractor roll over due to brake failure in Chikmagalur Lucky driver escaped)

Published On - 3:37 pm, Sun, 22 August 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್